ದೇಶ

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಅಕಾಲಿದಳ ಮಾಜಿ ನಾಯಕ ಸಿರ್ಸಾ ನೇಮಕ

Lingaraj Badiger

ನವದೆಹಲಿ: ಅಕಾಲಿದಳ ಮಾಜಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಮಂಗಳವಾರ ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಮಂಜಿಂದರ್ ಸಿಂಗ್ ಸಿರ್ಸಾ ಅವರನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಿಸಿದ್ದಾರೆ ಎಂದು ಕೇಸರಿ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.

ಈ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ.

ದೆಹಲಿ ಮಾಜಿ ಶಾಸಕ ಸಿರ್ಸಾ ಅವರು 2022 ರಲ್ಲಿ ಪಂಜಾಬ್ ಚುನಾವಣೆಗೆ ಕೆಲವು ತಿಂಗಳುಗಳ ಮೊದಲು 2021 ರ ಡಿಸೆಂಬರ್‌ನಲ್ಲಿ ಶಿರೋಮಣಿ ಅಕಾಲಿದಳ ತೊರೆದು ಕೇಸರಿ ಪಕ್ಷಕ್ಕೆ ಸೇರಿದ್ದರು.

SCROLL FOR NEXT