ಪ್ರಧಾನಿ ನರೇಂದ್ರ ಮೋದಿ 
ದೇಶ

ಗ್ಯಾಸ್ ಸಿಲಿಂಡರ್ ದರ ಕಡಿತ: ನನ್ನ ಸಹೋದರಿಯರ ಸೌಕರ್ಯವನ್ನು ಹೆಚ್ಚಿಸಿ, ಜೀವನ ಸುಲಭಗೊಳಿಸುತ್ತದೆ ಎಂದ ಪ್ರಧಾನಿ ಮೋದಿ

ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆ ಇಳಿಕೆಯು ಮಹಿಳೆಯರ ಸೌಕರ್ಯ ಹೆಚ್ಚಿಸಿ ಜೀವನವನ್ನು ಸುಲಭಗೊಳಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆ ಇಳಿಕೆಯು ಮಹಿಳೆಯರ ಸೌಕರ್ಯ ಹೆಚ್ಚಿಸಿ ಜೀವನವನ್ನು ಸುಲಭಗೊಳಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರ ಮಂಗಳವಾರ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್‌ನಲ್ಲಿ 400 ರೂ ಸಬ್ಸಿಡಿ ಘೋಷಣೆ ಮಾಡಿದ್ದು, ಉಜ್ವಲ ಯೋಜನೆಯಡಿಯಲ್ಲಿ ಇರುವವರಿಗೆ ರೂ.400 ಕಡಿಮೆ ಬೆಲೆಗೆ ಗ್ಯಾಸ್ ಸಿಲಿಂಡರ್ ಸಿಗಲಿದೆ. ಉಜ್ವಲ ಯೋಜನೆ ಫಲಾನುಭವಿಗಳಲ್ಲದವರಿಗೆ 200 ರೂ ಕಡಿಮೆ ದರದ ಸಿಲಿಂಡರ್ ಸಬ್ಸಿಡಿ ದೊರೆಯಲಿದೆ ಎಂದು ಹೇಳಿದೆ.

ಇದರ ಬೆನ್ನಲ್ಲೇ ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, "ರಕ್ಷಾ ಬಂಧನದ ಹಬ್ಬವು ಕುಟುಂಬದಲ್ಲಿ ಸಂತೋಷವನ್ನು ಹೆಚ್ಚಿಸುವ ದಿನವಾಗಿದೆ. ಗ್ಯಾಸ್ ಬೆಲೆಯಲ್ಲಿನ ಇಳಿಕೆಯು ನನ್ನ ಕುಟುಂಬದಲ್ಲಿನ ಸಹೋದರಿಯರ ಸೌಕರ್ಯವನ್ನು ಹೆಚ್ಚಿಸುತ್ತದೆ ಮತ್ತು ಅವರ ಜೀವನವನ್ನು ಸುಲಭಗೊಳಿಸುತ್ತದೆ. ನನ್ನ ಪ್ರತಿಯೊಬ್ಬ ಸಹೋದರಿಯು ಸಂತೋಷವಾಗಿರಿ, ಆರೋಗ್ಯವಾಗಿರಿ, ಇದು ದೇವರಿಂದ ನನ್ನ ಹಾರೈಕೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಸರ್ಕಾರದ ಗ್ಯಾಸ್ ಸಿಲಿಂಡರ್ ದರ ಕಡಿತ ಕ್ರಮವು ಬುಧವಾರದಿಂದ ಜಾರಿಗೆ ಬರಲಿದ್ದು, ದೇಶದಾದ್ಯಂತ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 200 ರೂಪಾಯಿ ಇಳಿಕೆಯಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT