ಸಾಂದರ್ಭಿಕ ಚಿತ್ರ 
ದೇಶ

ಮಧ್ಯ ಪ್ರದೇಶ: ಕಾರ್ಖಾನೆಯಲ್ಲಿ ಶಂಕಿತ ವಿಷಾನಿಲ ಉಸಿರಾಡಿ ಮೂವರು ಸಹೋದರರು ಸೇರಿ ಐವರು ಕಾರ್ಮಿಕರು ಸಾವು

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಬುಧವಾರ ಶಂಕಿತ ವಿಷಾನಿಲವನ್ನು ಉಸಿರಾಡಿ ಮೂವರು ಸಹೋದರರು ಸೇರಿದಂತೆ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೊರೆನಾ: ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಬುಧವಾರ ಶಂಕಿತ ವಿಷಾನಿಲವನ್ನು ಉಸಿರಾಡಿ ಮೂವರು ಸಹೋದರರು ಸೇರಿದಂತೆ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಿಲ್ಲೆಯ ಧನೇಲಾ ಪ್ರದೇಶದಲ್ಲಿರುವ ಸಾಕ್ಷಿ ಆಹಾರ ಉತ್ಪನ್ನಗಳ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ಕಾರ್ಖಾನೆಯೊಳಗಿನ ಟ್ಯಾಂಕ್‌ನಿಂದ ಅನಿಲ ಹೊರಸೂಸಲಾರಂಭಿಸಿತು. ಅದನ್ನು ಪರಿಶೀಲಿಸಲು ಇಬ್ಬರು ಕಾರ್ಮಿಕರು ಪ್ರವೇಶಿಸಿದರು ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಭೂಪೇಂದ್ರ ಸಿಂಗ್ ಕುಶ್ವಾಹಾ ಪಿಟಿಐಗೆ ತಿಳಿಸಿದರು.

ಆ ಅನಿಲವನ್ನು ಉಸಿರಾಡಿದ ನಂತರ ಅವರು ಅಸ್ವಸ್ಥರಾದರು. ನಂತರ ಇನ್ನೂ ಮೂವರು ಕಾರ್ಮಿಕರಿಗೆ ತೊಂದರೆಯಾಯಿತು ಎಂದು ಅವರು ಹೇಳಿದರು.

ಬಳಿಕ ಅವರೆಲ್ಲರನ್ನೂ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಆ ವೇಳೆಗಾಗಲೇ ಅವರೆಲ್ಲರೂ ಮೃತಪಟ್ಟಿರುವುದಾಗಿ ಸಿವಿಲ್ ಸರ್ಜನ್ ಗಜೇಂದ್ರ ಸಿಂಗ್ ತೋಮರ್ ಘೋಷಿಸಿದರು. ನಂತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಖಾನೆಯು ಸಂಸ್ಕರಿಸಿದ ಚೆರ್ರಿಗಳನ್ನು ಮತ್ತು ಆಹಾರ ಉತ್ಪನ್ನಗಳಲ್ಲಿ ಬಳಸುವ ಸಕ್ಕರೆ-ಮುಕ್ತ ರಾಸಾಯನಿಕಗಳನ್ನು ತಯಾರಿಸುತ್ತದೆ.

ಮೃತರನ್ನು ಟಿಕ್ಟೋಲಿ ಗ್ರಾಮದ ಸೋದರರಾದ ರಾಮಾವತಾರ್ ಗುರ್ಜರ್ (35), ರಾಮನರೇಶ್ ಗುರ್ಜರ್ (40) ಮತ್ತು ವೀರಸಿಂಗ್ ಗುರ್ಜರ್ (30) ಮತ್ತು ಗಣೇಶ್ ಗುರ್ಜರ್ (40) ಮತ್ತು ಗಿರ್ರಾಜ್ ಗುರ್ಜರ್ (28) ಎಂದು ಗುರುತಿಸಲಾಗಿದೆ.

ಘಟನೆಯ ನಂತರ ಜಿಲ್ಲಾಧಿಕಾರಿಗಳು ಕಾರ್ಖಾನೆಯನ್ನು ತೆರವುಗೊಳಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT