ಅರವಿಂದ ಕೇಜ್ರಿವಾಲ್ 
ದೇಶ

ಅರವಿಂದ್ ಕೇಜ್ರಿವಾಲ್ ಪ್ರಧಾನಿ ಹುದ್ದೆಯ ರೇಸ್ ನಲ್ಲಿಲ್ಲ: ಆತಿಷಿ

ಇಂಡಿಯಾ ಬಣದ ಪ್ರಧಾನಿ ಹುದ್ದೆಯ ಆಕಾಂಕ್ಷಿಗಳಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಇದ್ದಾರೆ ಎಂಬ ಆಪ್ ನಾಯಕರ ಹೇಳಿಕೆ ಬೆನ್ನಲ್ಲೇ ಕೇಜ್ರಿವಾಲ್ ಪ್ರಧಾನಿ ಹುದ್ದೆಯ ರೇಸ್ ನಲ್ಲಿಲ್ಲ ಎಂದು ದೆಹಲಿ ಸಚಿವೆ ಆತಿಷಿ ಹೇಳಿದ್ದಾರೆ.

ನವದೆಹಲಿ: ಇಂಡಿಯಾ ಬಣದ ಪ್ರಧಾನಿ ಹುದ್ದೆಯ ಆಕಾಂಕ್ಷಿಗಳಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಇದ್ದಾರೆ ಎಂಬ ಆಪ್ ನಾಯಕರ ಹೇಳಿಕೆ ಬೆನ್ನಲ್ಲೇ ಕೇಜ್ರಿವಾಲ್ ಪ್ರಧಾನಿ ಹುದ್ದೆಯ ರೇಸ್ ನಲ್ಲಿಲ್ಲ ಎಂದು ದೆಹಲಿ ಸಚಿವೆ ಆತಿಷಿ ಹೇಳಿದ್ದಾರೆ.

ಕೇಜ್ರಿವಾಲ್ ಪ್ರಧಾನಿ ಹುದ್ದೆಯ ರೇಸ್‌ನಲ್ಲಿ ಇಲ್ಲ ಎಂದು ಅತಿಶಿ ಹೇಳಿದ್ದು, ಕಕ್ಕರ್ ಅವರ ಹೇಳಿಕೆಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ದೆಹಲಿ ಕ್ಯಾಬಿನೆಟ್ ಸಚಿವೆ ಆತಿಷಿ, "ಅರವಿಂದ್ ಕೇಜ್ರಿವಾಲ್ ದೇಶದ ಪ್ರಧಾನಿಯಾಗುವ ರೇಸ್‌ನಲ್ಲಿ ಇಲ್ಲ ಎಂದು ನಾನು ಅಧಿಕೃತಗೊಳಿಸುತ್ತಿದ್ದೇನೆ. ಸಂವಿಧಾನ, ಪ್ರಜಾಪ್ರಭುತ್ವ ಮತ್ತು ದೇಶವನ್ನು ಉಳಿಸಲು ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರಿದ್ದಾರೆ, ಕಕ್ಕರ್ ಅವರ ಅಭಿಪ್ರಾಯಗಳು ಅವರ ವೈಯಕ್ತಿಕವಾಗಿದೆ ಎಂದು ಹೇಳಿದರು.

ಆಮ್ ಆದ್ಮಿ ಪಕ್ಷದ ಮುಖ್ಯ ರಾಷ್ಟ್ರೀಯ ವಕ್ತಾರ ಪ್ರಿಯಾಂಕಾ ಕಕ್ಕರ್ ಅವರು ಬುಧವಾರ ಅರವಿಂದ್ ಕೇಜ್ರಿವಾಲ್ ಅವರನ್ನು ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಧಾನಿ ಹುದ್ದೆಯ ಆಕಾಂಕ್ಷಿ ಎಂದು ಹೇಳಿದ್ದರು. ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಇಡೀ ದೇಶಕ್ಕೆ ಪ್ರಯೋಜನವಾಗುವಂತಹ ಮಾದರಿಯನ್ನು ನೀಡಿದ್ದಾರೆ ಎಂದು ಕಕ್ಕರ್ ಹೇಳಿದ್ದರು. ಅವರ ಈ ಹೇಳಿಕೆ ವ್ಯಾಪಕ ಚರ್ಚೆಗೀಡಾದ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ದೆಹಲಿ ಸಚಿವೆ ಆತಿಷಿ ಅವರು, ಅರವಿಂದ್ ಕೇಜ್ರಿವಾಲ್ ಪ್ರಧಾನಿ ಹುದ್ದೆಯ ರೇಸ್ ನಲ್ಲಿಲ್ಲ. ನಮ್ಮ ಮುಖ್ಯಮಂತ್ರಿಗಳಿಗೆ ಅಂತಹ ಆಕಾಂಕ್ಷೆಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಎದುರಿಸಲು ಮತ್ತು ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ವಿರೋಧ ಪಕ್ಷದ ನಾಯಕರು ಜಂಟಿ ಪ್ರಚಾರ ತಂತ್ರವನ್ನು ರೂಪಿಸುವ ನಿರೀಕ್ಷೆಯಿರುವ ಮುಂಬೈನಲ್ಲಿ ಇಂಡಿಯಾ ಮೈತ್ರಿಕೂಟದ ಸಭೆಯ ಒಂದು ದಿನದ ಮೊದಲು ಈ ಹೇಳಿಕೆಗಳು ಬಂದಿವೆ.

ಇಂಡಿಯಾ ಮೈತ್ರಿಕೂಟಕ್ಕೆ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬ ಪ್ರಶ್ನೆಗೆ ಎಎಪಿಯ ಮುಖ್ಯ ರಾಷ್ಟ್ರೀಯ ವಕ್ತಾರ ಪ್ರಿಯಾಂಕಾ ಕಕ್ಕರ್ ಅವರು ಪಿಟಿಐಗೆ, "ವಕ್ತಾರನಾಗಿ ನಾನು ನಮ್ಮ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನು ಪ್ರಸ್ತಾಪಿಸುತ್ತೇನೆ" ಎಂದು ಹೇಳಿದರು. ಕೇಜ್ರಿವಾಲ್ ನಿರಂತರವಾಗಿ ಜನರ ಸಮಸ್ಯೆಗಳನ್ನು ಕೇಂದ್ರೀಕರಿಸಿ ಕೆಲಸ ಮಾಡಿದ್ದಾರೆ ಮತ್ತು ಮಾದರಿ ಆಡಳಿತ ನೀಡಿದ್ದಾರೆ. ಅವರು ಜನರಿಗೆ ಅನುಕೂಲವಾಗುವ ಮಾದರಿಯನ್ನು ನೀಡಿದ್ದಾರೆ. ಹೀಗಾಗಿ ಅವರು ಪ್ರಧಾನಿ ಆಗಬೇಕೆಂದು ನಾನು ಬಯಸುತ್ತೇನೆ. ಆದರೆ ನಿರ್ಧಾರ ನನ್ನ ಕೈಯಲ್ಲಿಲ್ಲ ಎಂದು ಹೇಳಿದರು.

ಪಕ್ಷದ ದೆಹಲಿ ಸಂಚಾಲಕ ಮತ್ತು ಪರಿಸರ ಸಚಿವ ಗೋಪಾಲ್ ರೈ ಅವರನ್ನು ಈ ಬಗ್ಗೆ ಕೇಳಿದಾಗ, ಎಎಪಿಯ ಪ್ರತಿಯೊಬ್ಬ ಸದಸ್ಯರು ಕೇಜ್ರಿವಾಲ್ ಅವರನ್ನು ಪ್ರಧಾನಿ ಹುದ್ದೆಯಲ್ಲಿ ನೋಡಲು ಬಯಸುತ್ತಾರೆ. ಆದರೆ ಅದರ ನಿರ್ಧಾರವನ್ನು ಇಂಡಿಯಾ ಮೈತ್ರಿಕೂಟದ ಎಲ್ಲಾ ಸದಸ್ಯರು ಮಾತ್ರ ಅಂತಿಮಗೊಳಿಸುತ್ತಾರೆ. ಪ್ರತಿಯೊಂದು ಪಕ್ಷವೂ ತಮ್ಮ ನಾಯಕ ಪ್ರಧಾನಿಯಾಗಬೇಕೆಂದು ಬಯಸುತ್ತದೆ. ಎಎಪಿ ಸದಸ್ಯರೂ ತಮ್ಮ ರಾಷ್ಟ್ರೀಯ ಸಂಚಾಲಕ ಪ್ರಧಾನಿಯಾಗಬೇಕೆಂದು ಬಯಸುತ್ತಾರೆ. ಇಂಡಿಯಾ ಮೈತ್ರಿಕೂಟದ ಎಲ್ಲಾ ಸದಸ್ಯರು ಕುಳಿತು ಚರ್ಚಿಸಿಕೈಗೊಳ್ಳುವ ಯಾವುದೇ ನಿರ್ಧಾರವಾಗಿದ್ದರೂ ನಾವು ಅದರಂತೆ ಹೋಗುತ್ತೇವೆ" ಎಂದು ಅವರು ಹೇಳಿದರು.

ಎಎಪಿಯು ಕೇಜ್ರಿವಾಲ್ ಹೆಸರನ್ನು ಪ್ರಧಾನಿ ಅಭ್ಯರ್ಥಿಯಾಗಿ ಪ್ರಸ್ತಾಪಿಸುತ್ತದೆಯೇ ಎಂಬ ಪ್ರಶ್ನೆಗೆ, "ಹೆಸರು ನೀಡುವಂತೆ ಏನೂ ಇಲ್ಲ, ನಾವು ಈಗಾಗಲೇ ಅದರ ಭಾಗವಾಗಿದ್ದೇವೆ ಮತ್ತು ಅರವಿಂದ್ ಕೇಜ್ರಿವಾಲ್ ಬಣದ ಭಾಗವಾಗಿದ್ದಾರೆ" ಎಂದು ಅವರು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT