ಅಸ್ವಸ್ಥ ಚಿರತೆ ಮೇಲೆ ಕುಳಿತು ಸವಾರಿಗೆ ಯತ್ನಸಿದ ಗ್ರಾಮಸ್ಥರು 
ದೇಶ

ಮಧ್ಯ ಪ್ರದೇಶ: ಅಸ್ವಸ್ಥ ಚಿರತೆ ಮೇಲೆ ಕುಳಿತು ಸವಾರಿಗೆ ಗ್ರಾಮಸ್ಥರು ಯತ್ನ!

ಅಸ್ವಸ್ಥಗೊಂಡಿರುವ ಚಿರತೆಯನ್ನು ಸುತ್ತುವರೆದ ಗ್ರಾಮಸ್ಥರ ಗುಂಪು, ಅದರ ಮೇಲೆ ಕುಳಿತು ಸೆಲ್ಫಿ ತೆಗೆದುಕೊಳ್ಳುತ್ತಿರುವ ಮತ್ತು ಅದರ ಮೇಲೆ ಸವಾರಿ ಮಾಡಲು ಪ್ರಯತ್ನಿಸುತ್ತಿರುವ ಆಘಾತಕಾರಿ ಘಟನೆ ಮಧ್ಯ ಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ಇಂದೋರ್: ಅಸ್ವಸ್ಥಗೊಂಡಿರುವ ಚಿರತೆಯನ್ನು ಸುತ್ತುವರೆದ ಗ್ರಾಮಸ್ಥರ ಗುಂಪು, ಅದರ ಮೇಲೆ ಕುಳಿತು ಸೆಲ್ಫಿ ತೆಗೆದುಕೊಳ್ಳುತ್ತಿರುವ ಮತ್ತು ಅದರ ಮೇಲೆ ಸವಾರಿ ಮಾಡಲು ಪ್ರಯತ್ನಿಸುತ್ತಿರುವ ಆಘಾತಕಾರಿ ಘಟನೆ ಮಧ್ಯ ಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ಮಂಗಳವಾರ ದೇವಾಸ್‌ನ ಇಕ್ಲೇರಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ರಕ್ಷಿಸಿ, ಚಿಕಿತ್ಸೆ ನೀಡುತ್ತಿದ್ದಾರೆ.

ಚಿರತೆಯನ್ನ ಸುತ್ತುವರಿದು, ಅದರ ಮೇಲೆ ಆನೆ ಮೇಲೆ ಕುಳಿತಂತೆ ಕುಳಿತು ಕಪಿಚೇಷ್ಟೆ ಆಡಿದ್ದಾರೆ. ಸುಮಾರು 15ರಿಂದ 20 ಜನರು ಚಿರತೆ ಬಳಿ ಸುತ್ತುವರಿದು ಅದರ ಜೊತೆಗೆ ಹುಚ್ಚಾಟ ಮೆರೆದಿದ್ದಾರೆ. 

ಅಸ್ವಸ್ಥತೆಯಿಂದ ಬಳಲುತ್ತಿರುವ ಚಿರತೆಯನ್ನು ಬುಧವಾರ ಇಂದೋರ್ ನಗರದ ಮೃಗಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದೋರ್‌ನಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಇಕ್ಲೇರಾ ಗ್ರಾಮದಲ್ಲಿ ಮಂಗಳವಾರ ಚಿರತೆಯನ್ನು ರಕ್ಷಿಸಲಾಗಿದೆ ಎಂದು ದೇವಾಸ್‌ನಲ್ಲಿರುವ ಅರಣ್ಯ ಇಲಾಖೆಯ ಖೋನಿ ಅಭಯಾರಣ್ಯದ ಅಧೀಕ್ಷಕ ವಿಕಾಸ್ ಮಹೋರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

ಸ್ಮೃತಿ ಮಂಧಾನ 'ಮದುವೆ' ಮುಂದೂಡಿಕೆ: ಮಹತ್ವದ ನಿರ್ಧಾರ ತೆಗೆದುಕೊಂಡ ಜೆಮಿಮಾ ರೊಡ್ರಿಗಸ್!

ಗಲ್ಲು ಶಿಕ್ಷೆ ಬೆನ್ನಲ್ಲೇ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ರಾಜಕೀಯ ಅಂದ್ರೆ ಅದು.... ಸಿಎಂ ಕುರ್ಚಿ ಗುದ್ದಾಟದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಮಾಜಿ ಸಂಸದೆ ರಮ್ಯಾ

SCROLL FOR NEXT