ಅಮರನಾಥ ಯಾತ್ರೆ ವೇಳೆ ಭದ್ರತಾ ಸಿಬ್ಬಂದಿ ಚಿತ್ರ 
ದೇಶ

ಅಮರನಾಥ ಯಾತ್ರೆ ಮುಕ್ತಾಯ: ಈ ಬಾರಿ 4.4 ಲಕ್ಷಕ್ಕೂ ಹೆಚ್ಚು ಯಾತ್ರಿಕರಿಂದ ಶಿವಲಿಂಗ ದರ್ಶನ

ಈ ವರ್ಷ ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ ಅಮರನಾಥ ಗುಹೆ ದೇಗುಲದಲ್ಲಿ 4.4 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಪ್ರಾರ್ಥನೆ ಸಲ್ಲಿಸುವುದರೊಂದಿಗೆ 62 ದಿನಗಳ ವಾರ್ಷಿಕ ಅಮರನಾಥ ಯಾತ್ರೆ ಗುರುವಾರ ಮುಕ್ತಾಯಗೊಂಡಿದೆ.

ನವದೆಹಲಿ: ಈ ವರ್ಷ ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ ಅಮರನಾಥ ಗುಹೆ ದೇಗುಲದಲ್ಲಿ 4.4 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಪ್ರಾರ್ಥನೆ ಸಲ್ಲಿಸುವುದರೊಂದಿಗೆ 62 ದಿನಗಳ ವಾರ್ಷಿಕ ಅಮರನಾಥ ಯಾತ್ರೆ ಗುರುವಾರ ಮುಕ್ತಾಯಗೊಂಡಿದೆ.

ಜುಲೈ 1 ರಂದು ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳ ಮೂಲಕ ಪ್ರಾರಂಭವಾದ ಯಾತ್ರೆಯಲ್ಲಿ ಒಟ್ಟು 4,45,338 ಭಕ್ತರು ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ 'ಶಿವಲಿಂಗ'ಕ್ಕೆ ಪೂಜೆ ಸಲ್ಲಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷದ ಯಾತ್ರೆಯ ಸಂದರ್ಭದಲ್ಲಿ ಯಾತ್ರಾರ್ಥಿಗಳು ಮತ್ತು ಸೇವಾ ಪೂರೈಕೆದಾರರು ಸೇರಿದಂತೆ 48 ಜನರು ಸಾವನ್ನಪ್ಪಿದ್ದಾರೆ ಮತ್ತು 62 ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹವಾಮಾನ ಸಂಬಂಧಿತ ಘಟನೆಗಳು ಅಥವಾ ನೈಸರ್ಗಿಕ ಕಾರಣಗಳಿಂದ ಸಾವು ಸಂಭವಿಸಿದ್ದು, ಯಾತ್ರಿಕರ ಸಂಖ್ಯೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿದೆ. ಕಳೆದ ವರ್ಷ 3.65 ಲಕ್ಷ  ಭಕ್ತರು ಯಾತ್ರೆ ಕೈಗೊಂಡಿದ್ದರು ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT