ಸಾಂದರ್ಭಿಕ ಚಿತ್ರ 
ದೇಶ

ಸೆಪ್ಟೆಂಬರ್ ನಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕು ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ಆಗಸ್ಟ್ ತಿಂಗಳಲ್ಲಿ ಕೈ ಕೊಟ್ಟಿರುವ ನೈರುತ್ಯ ಮುಂಗಾರು ಸೆಪ್ಟೆಂಬರ್ ತಿಂಗಳಿನಲ್ಲಿ ಮತ್ತೆ ಚುರುಕುಗೊಳುವ ಸಾಧ್ಯತೆಯಿದ್ದು, ದೇಶದ ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವದೆಹಲಿ: ಆಗಸ್ಟ್ ತಿಂಗಳಲ್ಲಿ ಕೈ ಕೊಟ್ಟಿರುವ ನೈರುತ್ಯ ಮುಂಗಾರು ಸೆಪ್ಟೆಂಬರ್ ತಿಂಗಳಿನಲ್ಲಿ ಮತ್ತೆ ಚುರುಕುಗೊಳುವ ಸಾಧ್ಯತೆಯಿದ್ದು, ದೇಶದ ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ ನಲ್ಲಿ ವಾಡಿಕೆ ಮಳೆ ಆಗುವ ಸಾಧ್ಯತೆಯಿದೆ. ಧೀರ್ಘವಾಧಿಯ ಸರಾಸರಿ ಮಳೆ ಪ್ರಮಾಣ 167.9 ಮಿ.ಮೀ ನ ಶೇಕಡ 91. 109 ರಷ್ಟು ಮಳೆ ಬೀಳುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

ವರ್ಚುಯಲ್ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಮೊಹಾಪಾತ್ರ, ಸೆಪ್ಟೆಂಬರ್ ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಿದ್ದರೂ, ಜೂನ್-ಸೆಪ್ಟೆಂಬರ್ ಅವಧಿಯಲ್ಲಿನ ಮಳೆ ಪ್ರಮಾಣ ವಾಡಿಕೆಗಿಂತ ಕಡಿಮೆಯೇ ಇರಲಿದೆ ಎಂದು ಹೇಳಿದರು.

ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೊ ಪರಿಸ್ಥಿತಿಗಳ ಬೆಳವಣಿಗೆಯು ಆಗಸ್ಟ್‌ನಲ್ಲಿ ಮಳೆ ಕೊರತೆ ಹಿಂದಿನ ಪ್ರಮುಖ ಅಂಶವಾಗಿದೆ. ಆದಾಗ್ಯೂ, ಅರೇಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಸಮುದ್ರ ಮೇಲ್ಮೈ ತಾಪಮಾನದಲ್ಲಿನ ವ್ಯತ್ಯಾಸ  ಧನಾತ್ಮಕವಾಗಿ ಬದಲಾಗಲು ಪ್ರಾರಂಭಿಸಿದ್ದು, ಇದು ಎಲ್ ನಿನೋ ಪ್ರಭಾವವನ್ನು ಎದುರಿಸಬಹುದಾಗಿದೆ. ಉಷ್ಣವಲಯ ಪ್ರದೇಶದಲ್ಲಿನ ಮಳೆಯು ಸಹ ಅನುಕೂಲಕರವಾಗಿ ಬದಲಾಗುತ್ತಿದ್ದು, ನೈರುತ್ಯ ಮುಂಗಾರು ಮತ್ತೆ ಚುರುಕುಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಮೊಹಪಾತ್ರ ವಿವರಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT