ಮಣಿಪುರದ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿ. 
ದೇಶ

ಮಣಿಪುರ: ಗುಂಡಿನ ಚಕಮಕಿಯಲ್ಲಿ ಬುಡಕಟ್ಟು ಗೀತರಚನೆಕಾರ ಸೇರಿ ನಾಲ್ವರು ಸಾವು

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕುಕಿ-ಜೋ ಗೀತರಚನೆಕಾರ ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಗುವಾಹಟಿ: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕುಕಿ-ಜೋ ಗೀತರಚನೆಕಾರ ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಗೀತರಚನೆಕಾರ ಎಲ್ಎಸ್ ಮಂಗ್ಬೋಯಿ ಲುಂಗ್ಡಿಮ್ (42) ಮತ್ತು ಇತರ ಇಬ್ಬರು ಕುಕಿ-ಜೋ ಬುಡಕಟ್ಟು ಜನಾಂಗದವರು ನಿನ್ನೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚುರಾಚಂದ್‌ಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಂಜೆ ನಂತರ ಲುಂಗ್ಡಿಮ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಾಗ, ಅವರನ್ನು ರಸ್ತೆಯ ಮೂಲಕ ಗುವಾಹಟಿಗೆ ಸ್ಥಳಾಂತರಿಸಲಾಯಿತು. ಆದರೆ ಗುರುವಾರ ಬೆಳಗ್ಗೆ ಅವರು ಸಾವನ್ನಪ್ಪಿದರು. ನಂತರ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಸಹ ಸಾವನ್ನಪ್ಪಿದ್ದಾರೆ.

ಇನ್ನು ಇಂದು ನಡೆದ ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ ಇನ್ನಿಬ್ಬರು ಆದಿವಾಸಿಗಳು ಸಾವನ್ನಪ್ಪಿದ್ದು, ಇಬ್ಬರು ಆದಿವಾಸಿಗಳು ಗಾಯಗೊಂಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT