ಸಾಂದರ್ಭಿಕ ಚಿತ್ರ 
ದೇಶ

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆ-ಉಗ್ರನ ನಡುವೆ ಗುಂಡಿನ ಚಕಮಕಿ; ಎಲ್‌ಇಟಿಗೆ ಸೇರಿದ ಭಯೋತ್ಪಾದಕ ಹತ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಗೆ ಸೇರಿದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಗೆ ಸೇರಿದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ಅರಿಹಾಲ್ ಗ್ರಾಮದಲ್ಲಿ ಉಗ್ರ ಅಡಗಿರುವ ಕುರಿತು ಲಭ್ಯವಾದ ನಿರ್ದಿಷ್ಟ ಗುಪ್ತಚರ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಗುರುವಾರ ಆ ಪ್ರದೇಶದಲ್ಲಿ ಗಸ್ತು ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ಅಡಗಿಕೊಂಡಿದ್ದ ಭಯೋತ್ಪಾದಕ ಭದ್ರತಾ ಪಡೆಗಳ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾನೆ. ಅದಕ್ಕೆ ಪ್ರತೀಕಾರವಾಗಿ ಭದ್ರತಾ ಪಡೆಗಳು ಎನ್‌ಕೌಂಟರ್‌ ನಡೆಸಿವೆ ಎಂದು ಅವರು ಹೇಳಿದರು.

ಪಿಂಜೂರ ಶೋಪಿಯಾನ್‌ನ ನಿವಾಸಿ ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಇಟಿಯೊಂದಿಗೆ ಸಂಬಂಧ ಹೊಂದಿರುವ ಕಿಫಾಯತ್ ಅಯೂಬ್ ಅಲಿ ಎಂದು ಗುರುತಿಸಲಾದ ಉಗ್ರನನನ್ನು ಸೆದೆಬಡಿಯಲಾಗಿದೆ. ಎನ್‌ಕೌಂಟರ್ ಸ್ಥಳದಿಂದ ಆತನ ಮೃತದೇಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಪೊಲೀಸ್ ದಾಖಲೆಗಳು ಆತ ಹಲವಾರು ಭಯೋತ್ಪಾದನೆ ಸಂಬಂಧಿತ ಅಪರಾಧಗಳಲ್ಲಿ ಭಾಗಿಯಾಗಿರುವುದನ್ನು ಸೂಚಿಸುತ್ತವೆ ಎಂದು ವಕ್ತಾರರು ಸೇರಿಸಿದ್ದಾರೆ.

ಎನ್‌ಕೌಂಟರ್ ಸ್ಥಳದಿಂದ ಪಿಸ್ತೂಲ್, ಎರಡು ಮ್ಯಾಗಜೀನ್‌ಗಳು, ಐದು ರೌಂಡ್ಸ್‌ಗಳು, ಎರಡು ಗ್ರೆನೇಡ್‌ ಸೇರಿದಂತೆ ನಿಷೇಧಿತ ವಸ್ತುಗಳು ಮತ್ತು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್