ಪಂಜಾಬ್ ನ್ಯಾಷನಲ್ ಬ್ಯಾಂಕಿನ ಶಾಖೆಯೊಂದರಲ್ಲಿ ಶಸ್ತ್ರಸಜ್ಜಿತ ಡಕಾಯಿತರಿಂದ ದರೋಡೆ 
ದೇಶ

ಮಣಿಪುರ: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಿಂದ 18 ಕೋಟಿ ರೂ. ಲೂಟಿ ಮಾಡಿದ ಶಸ್ತ್ರಸಜ್ಜಿತ ಡಕಾಯಿತರು!

ಮಣಿಪುರದ ಉಖ್ರುಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕ್‌ನ ಶಾಖೆಯೊಂದರಿಂದ ಮುಖಕ್ಕೆ ಮಾಸ್ಕ್ ಧರಿಸಿದ ಶಸ್ತ್ರಸಜ್ಜಿತ ಡಕಾಯಿತರು 18.80 ಕೋಟಿ ರೂ. ಹಣವನ್ನು ದೋಚಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಕುರಿತು ಉಖ್ರುಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇಂಫಾಲ: ಮಣಿಪುರದ ಉಖ್ರುಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕ್‌ನ ಶಾಖೆಯೊಂದರಿಂದ ಮುಖಕ್ಕೆ ಮಾಸ್ಕ್ ಧರಿಸಿದ ಶಸ್ತ್ರಸಜ್ಜಿತ ಡಕಾಯಿತರು 18.80 ಕೋಟಿ ರೂ. ಹಣವನ್ನು ದೋಚಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಈ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯು ಭಾರತೀಯ ರಿಸರ್ವ್ ಬ್ಯಾಂಕ್ ಉಖ್ರುಲ್ ಜಿಲ್ಲೆಯ ಇತರೆ ಬ್ಯಾಂಕ್‌ಗಳು ಮತ್ತು ಎಟಿಎಂಗಳಿಗೆ ಮೀಸಲಾದ ಹಣವನ್ನು ಸಂಗ್ರಹಿಸುವ ಕರೆನ್ಸಿ ಚೆಸ್ಟ್ ಆಗಿದೆ.

ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದರೋಡೆಕೋರರು ರಾಜ್ಯ ರಾಜಧಾನಿ ಇಂಫಾಲ್‌ನಿಂದ ಸುಮಾರು 80 ಕಿಮೀ ದೂರದಲ್ಲಿರುವ ಉಖ್ರುಲ್ ಪಟ್ಟಣದ ಬ್ಯಾಂಕ್‌ಗೆ ಆಗಮಿಸಿ, ಭದ್ರತಾ ಸಿಬ್ಬಂದಿಯನ್ನು ಬೆದರಿಸಿ ಹಣವನ್ನು ದೋಚಿದ್ದಾರೆ.

ದುಷ್ಕರ್ಮಿಗಳು, ನೌಕರರು ಮತ್ತು ಭದ್ರತಾ ಸಿಬ್ಬಂದಿಯನ್ನು ಬ್ಯಾಂಕ್‌ನ ವಾಶ್‌ರೂಮ್‌ನೊಳಗೆ ಲಾಕ್ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗನ್ ಪಾಯಿಂಟ್‌ನಲ್ಲಿ ಬ್ಯಾಂಕ್‌ನ ಹಿರಿಯ ಸಿಬ್ಬಂದಿಯಿಂದಲೇ ವಾಲ್ಟ್ ತೆರೆಯಿಸಿದ್ದು, ಬಳಿಕ ದರೋಡೆಕೋರರು ಹಣವನ್ನು ದೋಚಿದ್ದಾರೆ. ಈ ಕುರಿತು ಉಖ್ರುಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆರೋಪಿಗಳನ್ನು ಗುರುತಿಸಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT