ರಾಹುಲ್ ಗಾಂಧಿ 
ದೇಶ

ಮಹಿಳಾ ನಾಯಕಿಯರ ಪರ ರಾಹುಲ್ ಗಾಂಧಿ ಬ್ಯಾಟಿಂಗ್, 10 ವರ್ಷಗಳಲ್ಲಿ ಶೇ.50 ರಷ್ಟು ಮಹಿಳಾ ಸಿಎಂ ಗುರಿ!

ಪಕ್ಷ ಸಂಘಟನೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ ನೀಡಬೇಕು ಮತ್ತು ಮುಂದಿನ 10 ವರ್ಷಗಳಲ್ಲಿ ಶೇಕಡಾ 50 ರಷ್ಟು ಮಹಿಳೆಯರನ್ನು ಮುಖ್ಯಮಂತ್ರಿಯಾಗಿಸುವ ಗುರಿ ಹೊಂದಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ...

ಕೊಚ್ಚಿ: ಪಕ್ಷ ಸಂಘಟನೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ ನೀಡಬೇಕು ಮತ್ತು ಮುಂದಿನ 10 ವರ್ಷಗಳಲ್ಲಿ ಶೇಕಡಾ 50 ರಷ್ಟು ಮಹಿಳೆಯರನ್ನು ಮುಖ್ಯಮಂತ್ರಿಯಾಗಿಸುವ ಗುರಿ ಹೊಂದಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಕೇರಳ ಮಹಿಳಾ ಕಾಂಗ್ರೆಸ್ ಸಮಾವೇಶ 'ಉತ್ಸಾಹ್' ಉದ್ಘಾಟಿಸಿ ಮಾತನಾಡಿದ ವಯನಾಡ್ ಸಂಸದ, ತಮ್ಮ ಪಕ್ಷದಲ್ಲಿ ಮುಖ್ಯಮಂತ್ರಿಯಾಗಲು ಅಗತ್ಯವಾದ ಗುಣಗಳನ್ನು ಹೊಂದಿರುವ ಹಲವಾರು ಮಹಿಳಾ ನಾಯಕರಿದ್ದಾರೆ ಎಂದು ಹೇಳಿದರು.

"ಇಂದಿನಿಂದ ಮುಂದಿನ 10 ವರ್ಷಗಳಲ್ಲಿ ನಮ್ಮ ಪಕ್ಷದ ಮುಖ್ಯಮಂತ್ರಿಗಳಲ್ಲಿ ಶೇ. 50 ರಷ್ಟು ಮಹಿಳೆಯರು ಇರಬೇಕು ಎಂಬುದು ನಮ್ಮ ಗುರಿ. ಇದು ಕಾಂಗ್ರೆಸ್ ಪಕ್ಷದ ಉತ್ತಮ ಗುರಿ ಎಂದು ನಾನು ಭಾವಿಸಿದ್ದೇನೆ... ಇಂದು ನಮ್ಮಲ್ಲಿ ಒಬ್ಬ ಮಹಿಳಾ ಮುಖ್ಯಮಂತ್ರಿ ಇಲ್ಲ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಉತ್ತಮ ಮುಖ್ಯಮಂತ್ರಿಯಾಗುವ ಗುಣ ಹೊಂದಿರುವ ಅನೇಕ ಮಹಿಳೆಯರು ಇದ್ದಾರೆ" ಎಂದು ರಾಹುಲ್ ಗಾಂಧಿ ಹೇಳಿದರು.

ಇದೇ ವೇಳೆ ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಇದು ಸಂಪೂರ್ಣವಾಗಿ ಪುರುಷ ಸಂಘಟನೆ ಎಂದರು.

"ಮಹಿಳೆಯರು ಅನೇಕ ವಿಧಗಳಲ್ಲಿ ಪುರುಷರಿಗಿಂತ ಶ್ರೇಷ್ಠರು ಎಂದು ನಾನು ಭಾವಿಸುತ್ತೇನೆ. ಅವರು ಪುರುಷರಿಗಿಂತ ಹೆಚ್ಚು ತಾಳ್ಮೆಯನ್ನು ಹೊಂದಿದ್ದಾರೆ. ಅವರು ಪುರುಷರಿಗಿಂತ ದೀರ್ಘಾವಧಿಯ ದೃಷ್ಟಿಕೋನವನ್ನು ಹೊಂದಿದ್ದಾರೆ. ಅವರು ಪುರುಷರಿಗಿಂತ ಹೆಚ್ಚು ಸಂವೇದನಾಶೀಲರು ಮತ್ತು ಸಹಾನುಭೂತಿ ಹೊಂದಿದ್ದಾರೆ. ಮಹಿಳೆಯರು ಅಧಿಕಾರ ರಚನೆಯ ಭಾಗವಾಗಿರಬೇಕು ಎಂದು ನಾವು ಮೂಲಭೂತವಾಗಿ ನಂಬುತ್ತೇವೆ. ಮಹಿಳೆಯರನ್ನು ಅಧಿಕಾರದಿಂದ ದೂರವಿಡುವುದು ಆರ್ ಎಸ್ಎಸ್ ಸಿದ್ಧಾಂತ" ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?