ಸಾಂದರ್ಭಿಕ ಚಿತ್ರ 
ದೇಶ

20 ಲಕ್ಷ ರೂ. ಲಂಚ ಸ್ವೀಕರಿಸಿದ ಇಡಿ ಅಧಿಕಾರಿಯನ್ನು ಚೇಸ್ ಮಾಡಿ ಬಂಧಿಸಿದ ತಮಿಳುನಾಡು ಪೊಲೀಸರು!

20 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಯನ್ನು ತಮಿಳುನಾಡು ಪೊಲೀಸರು ಶುಕ್ರವಾರ ದಿಂಡಿಗಲ್-ಮಧುರೈ ಹೆದ್ದಾರಿಯಲ್ಲಿ ಎಂಟು ಕಿಲೋಮೀಟರ್ ಚೇಸ್ ಮಾಡಿ ಬಂಧಿಸಿದ್ದಾರೆ.

ಮಧುರೈ: 20 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಯನ್ನು ತಮಿಳುನಾಡು ಪೊಲೀಸರು ಶುಕ್ರವಾರ ದಿಂಡಿಗಲ್-ಮಧುರೈ ಹೆದ್ದಾರಿಯಲ್ಲಿ ಎಂಟು ಕಿಲೋಮೀಟರ್ ಚೇಸ್ ಮಾಡಿ ಬಂಧಿಸಿದ್ದಾರೆ.

ದಿಂಡಿಗಲ್ ಜಿಲ್ಲೆಯ ಸರ್ಕಾರಿ ವೈದ್ಯರ ಅಕ್ರಮ ಆದಾಯ ಪ್ರಕರಣದ ತನಿಖೆ ನಡೆಸುತ್ತಿದ್ದ ಇಡಿ ಅಧಿಕಾರಿ ಅಂಕಿತ್ ತಿವಾರಿ ಅವರನ್ನು ತಮಿಳುನಾಡು ಭ್ರಷ್ಟಾಚಾರ ನಿಗ್ರಹ ವಿಭಾಗ - ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ(ಡಿವಿಎಸಿ) ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆದ್ದಾರಿಯಲ್ಲಿ ಡ್ರಾಪ್-ಆಫ್ ಪಾಯಿಂಟ್‌ನಲ್ಲಿ ಲಂಚದ ಮೊದಲ ಕಂತು 20 ಲಕ್ಷ ರೂಪಾಯಿ ಸ್ವೀಕರಿಸಿದ ನಂತರ ಇಡಿ ಅಧಿಕಾರಿಯ ಕಾರ್ ಚೇಸ್ ಮಾಡಿ ಬಂಧಿಸಲಾಗಿದೆ.

ಡಿವಿಎಸಿ ಅಧಿಕಾರಿಗಳು ಮಧುರೈನಲ್ಲಿರುವ ಇಡಿ ಉಪವಿಭಾಗೀಯ ಕಚೇರಿ ಮತ್ತು ಬಂಧಿತ ಇಡಿ ಅಧಿಕಾರಿ ಅಂಕಿತ್ ತಿವಾರಿ ಅವರ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ.

2016-ಬ್ಯಾಚ್ ನ ಅಧಿಕಾರಿ ತಿವಾರಿ ಅವರು ಈ ಹಿಂದೆ ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಮಧುರೈನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಿಂಡಿಗಲ್‌ನ ಸರ್ಕಾರಿ ವೈದ್ಯರೊಬ್ಬರಿಂದ 20 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಧಾನಸಭೆಯಲ್ಲಿ 'ಸಿಎಂ ಕುರ್ಚಿ ಕದನ' ಸದ್ದು: ಆರ್. ಅಶೋಕ್ ಮಾತಿಗೆ ಕೆರಳಿದ ಬೈರತಿ; ತೀವ್ರ ಮಾತಿನ ಚಕಮಕಿ!

ದರ್ಗಾ ಬಳಿ ಸಾಂಪ್ರದಾಯಿಕ ದೀಪ ಬೆಳಗಲು ಆದೇಶ: ಮದ್ರಾಸ್ ಹೈಕೋರ್ಟ್ ಜಡ್ಜ್ ಪದಚ್ಯುತಿಗೆ ವಿಪಕ್ಷದ 120 ಸಂಸದರ ಸಹಿ, ಓಂ ಬಿರ್ಲಾಗೆ ದೂರು!

ಸರ್ಕಾರದ ವಿರುದ್ಧ ಹೋರಾಡಿ ಗೆದ್ದ ಅಲೋಕ್ ಕುಮಾರ್​​ಗೆ DGP ಆಗಿ ಮುಂಬಡ್ತಿ: ADGP ಬಿ.ದಯಾನಂದ್ ವರ್ಗಾವಣೆ

Protection of personality rights: ಹೈಕೋರ್ಟ್ ಗೆ ಸಲ್ಮಾನ್ ಖಾನ್; ವ್ಯಕ್ತಿತ್ವ ಹಕ್ಕುಗಳ ರಕ್ಷಣೆ ಟ್ರೆಂಡ್ ಆಗ್ತಿರೋದೇಕೆ?

ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು!

SCROLL FOR NEXT