ನವದೆಹಲಿಯ ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯಲ್ಲಿ ಮಣಿಪುರಿ ದಂಪತಿ ಮೇಲೆ ಗುಂಪು ಹಲ್ಲೆ

ಆಗ್ನೇಯ ದೆಹಲಿಯ ಸನ್‌ಲೈಟ್ ಕಾಲೋನಿಯಲ್ಲಿ ಮಣಿಪುರದ ವ್ಯಕ್ತಿ, ಅವರ ಪತ್ನಿ ಮತ್ತು ಅವರ ಸಹೋದರಿಯ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ನವದೆಹಲಿ: ಆಗ್ನೇಯ ದೆಹಲಿಯ ಸನ್‌ಲೈಟ್ ಕಾಲೋನಿಯಲ್ಲಿ ಮಣಿಪುರದ ವ್ಯಕ್ತಿ, ಅವರ ಪತ್ನಿ ಮತ್ತು ಅವರ ಸಹೋದರಿಯ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
  
ಶುಕ್ರವಾರ ಬೆಳಗಿನ ಜಾವ 2.30ಕ್ಕೆ ಕಿಲೋಕರಿ ಗ್ರಾಮದಿಂದ ಘಟನೆಯ ಬಗ್ಗೆ ಪೊಲೀಸರಿಗೆ ಕರೆ ಬಂದಿದ್ದು, ಸ್ಥಳಕ್ಕೆ ಆಗಮಿಸಿದಾಗ ವ್ಯಕ್ತಿಯೊಬ್ಬನನ್ನು ಥಳಿಸಿರುವುದು ಕಂಡುಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಶ್ರಮದ ಜೀವನ್ ನಗರ ನಿವಾಸಿಯಾದ ಸಂತ್ರಸ್ತ ಮಣಿಪುರಿ ವ್ಯಕ್ತಿಯ ಮೊಣಕಾಲು, ಕಣ್ಣು ಮತ್ತು ತಲೆಗೆ ಗಂಭೀರ ಗಾಯಗಳಾಗಿವೆ.

ಗುರುವಾರ ಮಧ್ಯಂತರ ರಾತ್ರಿ ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿ ಮತ್ತು ಅವರ ಸಹೋದರಿಯನ್ನು ಸ್ನೇಹಿತನ ಮನೆಗೆ ಬಿಡಲು ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಸ್ತೆಯಲ್ಲಿ ಕ್ಯಾಬ್ ಗಾಗಿ ಕಾಯುತ್ತಿರುವಾಗ, ವ್ಯಕ್ತಿಯೊಬ್ಬರು ಮಣಿಪುರದ ವ್ಯಕ್ತಿಯನ್ನು ನಿಂದಿಸಲು ಪ್ರಾರಂಭಿಸಿದರು ಮತ್ತು ಅವರ ಪತ್ನಿ ಹಾಗೂ ಅವರ ಸಹೋದರಿಯ ಮೇಲೆ ಹಲ್ಲೆ ನಡೆಸಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

"ನಂತರ ಆರೋಪಿಗಳು ಇನ್ನೂ ಕೆಲವು ಜನರನ್ನು ಸ್ಥಳಕ್ಕೆ ಕರೆದುಕೊಂಡು ಬಂದಿದ್ದು, ಹಲವರು ಸೇರಿಕೊಂಡು ಮಣಿಪುರದ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ" ಎಂದು ಅಧಿಕಾರಿ ಹೇಳಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT