ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ 
ದೇಶ

3 ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಸೋಲು: INDIA ಮೈತ್ರಿಕೂಟದ ಸದಸ್ಯರಿಂದ ತೀವ್ರ ಟೀಕೆ

4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ 3 ರಾಜ್ಯಗಳಲ್ಲಿ ಸೋಲು ಕಂಡಿದೆ. 

ನವದೆಹಲಿ: 4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ 3 ರಾಜ್ಯಗಳಲ್ಲಿ ಸೋಲು ಕಂಡಿದೆ. 

ಈ ಫಲಿತಾಂಶ ಲೋಕಸಭಾ ಚುನಾವಣೆ-2024 ರ ದೃಷ್ಟಿಯಿಂದ ಬಿಜೆಪಿ ವಿರೋಧಿ INDIA ಮೈತ್ರಿಕೂಟದ ಮೇಲೆ ಪರಿಣಾಮ ಉಂಟುಮಾಡಿದ್ದು, ಕಾಂಗ್ರೆಸ್ ನ ಕಳಪೆ ಪ್ರದರ್ಶನದ ಬಗ್ಗೆ ಮೈತ್ರಿಕೂಟದಲ್ಲೇ ಟೀಕೆ ವ್ಯಕ್ತವಾಗತೊಡಗಿದೆ.
 
ಹಿಂದಿ ಭಾಷಿಕ ಪ್ರದೇಶಗಳಲ್ಲಿ ಕಾಂಗ್ರೆಸ್ ನ ಸೋಲು ಸೆಕ್ಯುಲರ್ ಡೆಮಾಕ್ರೆಟಿಕ್ ಪಕ್ಷಗಳಿಗೆ ಪಾಠ ಎಂದು ಹೇಳಿರುವ ಎಡಪಕ್ಷಗಳು ವಿಪಕ್ಷಗಳನ್ನು ಒಗ್ಗೂಡೀಸುವ ನಿಟ್ಟಿನಲ್ಲಿನ ಪ್ರಯತ್ನಗಳು ಇನ್ನಷ್ಟು ತೀವ್ರಗೊಳ್ಳಬೇಕೆಂದು ಹೇಳಿವೆ.

ಸಿಪಿಐ ನ ಪ್ರಧಾನ ಕಾರ್ಯದರ್ಶಿ ಡಿ ರಾಜ ಈ ಬಗ್ಗೆ ಮಾತನಾಡಿದ್ದು, ಬಿಜೆಪಿಯನ್ನು ಸೋಲಿಸುವುದಕ್ಕೆ ಒಗ್ಗಟ್ಟಿನಿಂದ ಇರುವುದೊಂದೇ ದಾರಿ, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೊಂದಿಕೊಳ್ಳಬೇಕು ಎಂದು ಹೇಳಿದ್ದಾರೆ.

ಸಿಪಿಐ-ಮಾರ್ಕ್ಸ್‌ವಾದಿ (ಸಿಪಿಐ-ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮಾತನಾಡಿ ಚುನಾವಣಾ ಫಲಿತಾಂಶಗಳು ಜನರ ಜೀವನೋಪಾಯ ಮತ್ತು ಭಾರತೀಯ ಗಣರಾಜ್ಯದ ಜಾತ್ಯತೀತ ಪ್ರಜಾಸತ್ತಾತ್ಮಕ ಸ್ವರೂಪದ ರಕ್ಷಣೆಯಲ್ಲಿ ತಮ್ಮ ಪ್ರಯತ್ನಗಳನ್ನು ದ್ವಿಗುಣಗೊಳಿಸುವ ಜಾತ್ಯತೀತ ಶಕ್ತಿಗಳ ಅಗತ್ಯವನ್ನು ಒತ್ತಿಹೇಳುತ್ತವೆ ಎಂದು ಹೇಳಿದ್ದಾರೆ.
  
INDIA ಮೈತ್ರಿಕೂಟದ ನೇತೃತ್ವ ವಹಿಸುವ ಮಾತನ್ನಾಡಿದ ಟಿಎಂಸಿ

ಇತ್ತ ಪಶ್ಚಿಮ ಬಂಗಾಳದ ಟಿಎಂಸಿ, ಕಾಂಗ್ರೆಸ್ ಸೋಲಿನ ಹಿನ್ನೆಲೆಯಲ್ಲಿ INDIA ಮೈತ್ರಿಕೂಟದ ನೇತೃತ್ವವನ್ನು ವಹಿಸಲು ಸಿದ್ಧವಿರುವುದಾಗಿ ಹೇಳಿಕೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT