ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ 
ದೇಶ

3 ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಸೋಲು: INDIA ಮೈತ್ರಿಕೂಟದ ಸದಸ್ಯರಿಂದ ತೀವ್ರ ಟೀಕೆ

4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ 3 ರಾಜ್ಯಗಳಲ್ಲಿ ಸೋಲು ಕಂಡಿದೆ. 

ನವದೆಹಲಿ: 4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ 3 ರಾಜ್ಯಗಳಲ್ಲಿ ಸೋಲು ಕಂಡಿದೆ. 

ಈ ಫಲಿತಾಂಶ ಲೋಕಸಭಾ ಚುನಾವಣೆ-2024 ರ ದೃಷ್ಟಿಯಿಂದ ಬಿಜೆಪಿ ವಿರೋಧಿ INDIA ಮೈತ್ರಿಕೂಟದ ಮೇಲೆ ಪರಿಣಾಮ ಉಂಟುಮಾಡಿದ್ದು, ಕಾಂಗ್ರೆಸ್ ನ ಕಳಪೆ ಪ್ರದರ್ಶನದ ಬಗ್ಗೆ ಮೈತ್ರಿಕೂಟದಲ್ಲೇ ಟೀಕೆ ವ್ಯಕ್ತವಾಗತೊಡಗಿದೆ.
 
ಹಿಂದಿ ಭಾಷಿಕ ಪ್ರದೇಶಗಳಲ್ಲಿ ಕಾಂಗ್ರೆಸ್ ನ ಸೋಲು ಸೆಕ್ಯುಲರ್ ಡೆಮಾಕ್ರೆಟಿಕ್ ಪಕ್ಷಗಳಿಗೆ ಪಾಠ ಎಂದು ಹೇಳಿರುವ ಎಡಪಕ್ಷಗಳು ವಿಪಕ್ಷಗಳನ್ನು ಒಗ್ಗೂಡೀಸುವ ನಿಟ್ಟಿನಲ್ಲಿನ ಪ್ರಯತ್ನಗಳು ಇನ್ನಷ್ಟು ತೀವ್ರಗೊಳ್ಳಬೇಕೆಂದು ಹೇಳಿವೆ.

ಸಿಪಿಐ ನ ಪ್ರಧಾನ ಕಾರ್ಯದರ್ಶಿ ಡಿ ರಾಜ ಈ ಬಗ್ಗೆ ಮಾತನಾಡಿದ್ದು, ಬಿಜೆಪಿಯನ್ನು ಸೋಲಿಸುವುದಕ್ಕೆ ಒಗ್ಗಟ್ಟಿನಿಂದ ಇರುವುದೊಂದೇ ದಾರಿ, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೊಂದಿಕೊಳ್ಳಬೇಕು ಎಂದು ಹೇಳಿದ್ದಾರೆ.

ಸಿಪಿಐ-ಮಾರ್ಕ್ಸ್‌ವಾದಿ (ಸಿಪಿಐ-ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮಾತನಾಡಿ ಚುನಾವಣಾ ಫಲಿತಾಂಶಗಳು ಜನರ ಜೀವನೋಪಾಯ ಮತ್ತು ಭಾರತೀಯ ಗಣರಾಜ್ಯದ ಜಾತ್ಯತೀತ ಪ್ರಜಾಸತ್ತಾತ್ಮಕ ಸ್ವರೂಪದ ರಕ್ಷಣೆಯಲ್ಲಿ ತಮ್ಮ ಪ್ರಯತ್ನಗಳನ್ನು ದ್ವಿಗುಣಗೊಳಿಸುವ ಜಾತ್ಯತೀತ ಶಕ್ತಿಗಳ ಅಗತ್ಯವನ್ನು ಒತ್ತಿಹೇಳುತ್ತವೆ ಎಂದು ಹೇಳಿದ್ದಾರೆ.
  
INDIA ಮೈತ್ರಿಕೂಟದ ನೇತೃತ್ವ ವಹಿಸುವ ಮಾತನ್ನಾಡಿದ ಟಿಎಂಸಿ

ಇತ್ತ ಪಶ್ಚಿಮ ಬಂಗಾಳದ ಟಿಎಂಸಿ, ಕಾಂಗ್ರೆಸ್ ಸೋಲಿನ ಹಿನ್ನೆಲೆಯಲ್ಲಿ INDIA ಮೈತ್ರಿಕೂಟದ ನೇತೃತ್ವವನ್ನು ವಹಿಸಲು ಸಿದ್ಧವಿರುವುದಾಗಿ ಹೇಳಿಕೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT