ಗುಲಾಂ ನಬಿ ಆಜಾದ್ 
ದೇಶ

ವಿಧಾನಸಭೆ ಚುನಾವಣೆ ಫಲಿತಾಂಶ: ಅಲ್ಪಸಂಖ್ಯಾತರು ಈಗ ಕಾಂಗ್ರೆಸ್‌ನ ಅಜೆಂಡಾದಲ್ಲಿಲ್ಲ: ಗುಲಾಂ ನಬಿ ಆಜಾದ್

ರಾಜ್ಯದ ಹಳೆಯ ಪಕ್ಷವಾದ ಕಾಂಗ್ರೆಸ್  ಅಜೆಂಡಾದಲ್ಲಿ ಅಲ್ಪಸಂಖ್ಯಾತರ ವಿಷಯವಿಲ್ಲದ ಕಾರಣ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಾಣುತ್ತಿದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ.

ಶ್ರೀನಗರ: ರಾಜ್ಯದ ಹಳೆಯ ಪಕ್ಷವಾದ ಕಾಂಗ್ರೆಸ್  ಅಜೆಂಡಾದಲ್ಲಿ ಅಲ್ಪಸಂಖ್ಯಾತರ ವಿಷಯವಿಲ್ಲದ ಕಾರಣ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಾಣುತ್ತಿದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ.

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆಜಾದ್, ದೇಶಾದ್ಯಂತ ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಾಂಗ್ರೆಸ್  ಉಲ್ಲೇಖಿಸಿಲ್ಲ ಎಂದು ತಿಳಿಸಿದರು. 

"ಕಳೆದ 20-25 ದಿನಗಳಲ್ಲಿ ಗಮನಿಸಿದ ಒಂದು ಅಂಶವೆಂದರೆ ಅಲ್ಪಸಂಖ್ಯಾತರ ಚಾಂಪಿಯನ್ ಎಂದು ಪರಿಗಣಿಸಲ್ಪಟ್ಟ ಕಾಂಗ್ರೆಸ್ ಅಲ್ಪಸಂಖ್ಯಾತರ ಬಗ್ಗೆ ಮಾತನಾಡಲಿಲ್ಲ. ಈಗ ಅಲ್ಪಸಂಖ್ಯಾತರು ಕಾಂಗ್ರೆಸ್‌ನ ಅಜೆಂಡಾದಲ್ಲಿಲ್ಲ ಎಂದು ಮಾಜಿ ಕಾಂಗ್ರೆಸ್ ನಾಯಕ ಆಜಾದ್ ಹೇಳಿದರು.

ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೆ ತನ್ನ ಅಧಿಕಾರ ಉಳಿಸಿಕೊಳ್ಳುತ್ತಿದ್ದು, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ನಿಂದ ಅಧಿಕಾರವನ್ನು ಹಿಂತೆಗೆದುಕೊಳ್ಳುವ ಮೂಲಕ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ನ್ನು ಅಧಿಕಾರದಿಂದ ಹೊರಹಾಕುವುದು ನಿಶ್ಚಿತವಾಗಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ ಎಂದ Kiren Rijiju, ವಿಪಕ್ಷಗಳ 'ಬಂಡಾಯ' ಪ್ರತಿಧ್ವನಿಸುವ ಸಾಧ್ಯತೆ!

ಬಲೂಚಿಗರಿಂದ ಆತ್ಮಾಹುತಿ ದಾಳಿ: 30ಕ್ಕೂ ಹೆಚ್ಚು Pakistan ಸೈನಿಕರು ಸಾವು, ಸ್ಫೋಟದ ವಿಡಿಯೋ ಬಿಡುಗಡೆ ಮಾಡಿದ BLA

ಇದು ನಿಜಕ್ಕೂ 'ಅಸಹ್ಯಕರ'; ಹೀಗೆ ಆಗುತ್ತಿರುವುದು ಮೂರನೇ ಬಾರಿ: ಆಕ್ರೋಶ ಹೊರಹಾಕಿದ ನಟಿ ತ್ರಿಶಾ!

ರಾಜ್ಯದಲ್ಲಿ SIR ಜಟಾಪಟಿ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು; ಸರ್ಕಾರದ ವಿರುದ್ದ ಗಂಭೀರ ಆರೋಪ

ಮೈಸೂರು: ಕಾಡಾನೆ ಕಾರ್ಯಾಚರಣೆಗಳಲ್ಲಿ 'ಅಂಬಾರಿ ಆನೆ' ಅಭಿಮನ್ಯುವಿನ ತಾಕತ್ತಾಗಿದ್ದ ಎಡಭಾಗದ ದಂತವೇ ಮುರಿತ!