ಗುಲಾಂ ನಬಿ ಆಜಾದ್ 
ದೇಶ

ವಿಧಾನಸಭೆ ಚುನಾವಣೆ ಫಲಿತಾಂಶ: ಅಲ್ಪಸಂಖ್ಯಾತರು ಈಗ ಕಾಂಗ್ರೆಸ್‌ನ ಅಜೆಂಡಾದಲ್ಲಿಲ್ಲ: ಗುಲಾಂ ನಬಿ ಆಜಾದ್

ರಾಜ್ಯದ ಹಳೆಯ ಪಕ್ಷವಾದ ಕಾಂಗ್ರೆಸ್  ಅಜೆಂಡಾದಲ್ಲಿ ಅಲ್ಪಸಂಖ್ಯಾತರ ವಿಷಯವಿಲ್ಲದ ಕಾರಣ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಾಣುತ್ತಿದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ.

ಶ್ರೀನಗರ: ರಾಜ್ಯದ ಹಳೆಯ ಪಕ್ಷವಾದ ಕಾಂಗ್ರೆಸ್  ಅಜೆಂಡಾದಲ್ಲಿ ಅಲ್ಪಸಂಖ್ಯಾತರ ವಿಷಯವಿಲ್ಲದ ಕಾರಣ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಾಣುತ್ತಿದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ.

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆಜಾದ್, ದೇಶಾದ್ಯಂತ ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಾಂಗ್ರೆಸ್  ಉಲ್ಲೇಖಿಸಿಲ್ಲ ಎಂದು ತಿಳಿಸಿದರು. 

"ಕಳೆದ 20-25 ದಿನಗಳಲ್ಲಿ ಗಮನಿಸಿದ ಒಂದು ಅಂಶವೆಂದರೆ ಅಲ್ಪಸಂಖ್ಯಾತರ ಚಾಂಪಿಯನ್ ಎಂದು ಪರಿಗಣಿಸಲ್ಪಟ್ಟ ಕಾಂಗ್ರೆಸ್ ಅಲ್ಪಸಂಖ್ಯಾತರ ಬಗ್ಗೆ ಮಾತನಾಡಲಿಲ್ಲ. ಈಗ ಅಲ್ಪಸಂಖ್ಯಾತರು ಕಾಂಗ್ರೆಸ್‌ನ ಅಜೆಂಡಾದಲ್ಲಿಲ್ಲ ಎಂದು ಮಾಜಿ ಕಾಂಗ್ರೆಸ್ ನಾಯಕ ಆಜಾದ್ ಹೇಳಿದರು.

ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೆ ತನ್ನ ಅಧಿಕಾರ ಉಳಿಸಿಕೊಳ್ಳುತ್ತಿದ್ದು, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ನಿಂದ ಅಧಿಕಾರವನ್ನು ಹಿಂತೆಗೆದುಕೊಳ್ಳುವ ಮೂಲಕ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ನ್ನು ಅಧಿಕಾರದಿಂದ ಹೊರಹಾಕುವುದು ನಿಶ್ಚಿತವಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!