ಕೆಟಿ ರಾಮ ರಾವ್ 
ದೇಶ

ತೆಲಂಗಾಣ: ಕಾಂಗ್ರೆಸ್‌ಗೆ ಅಭಿನಂದನೆ ಸಲ್ಲಿಸಿದ ಬಿಆರ್‌ಎಸ್‌ ನಾಯಕ ಕೆಟಿಆರ್‌; ಪಕ್ಷದ ಸೋಲಿನ ಬಗ್ಗೆ ಹೇಳಿದ್ದೇನು?

ಚುನಾವಣೋತ್ತರ ಸಮೀಕ್ಷೆಗಳು ನಿಜವಾಗಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯ (ಬಿಆರ್‌ಎಸ್) ನಾಯಕ ಕೆಟಿ ರಾಮರಾವ್ ಅವರು ನಿರಾಸೆ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷವನ್ನು ಅಭಿನಂದಿಸಿದ್ದಾರೆ.

ಹೈದರಾಬಾದ್: ಚುನಾವಣೋತ್ತರ ಸಮೀಕ್ಷೆಗಳು ನಿಜವಾಗಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯ (ಬಿಆರ್‌ಎಸ್) ನಾಯಕ ಕೆಟಿ ರಾಮರಾವ್ ಅವರು ನಿರಾಸೆ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷವನ್ನು ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಬಿಆರ್‌ಎಸ್ ಪಕ್ಷಕ್ಕೆ ಸತತ ಎರಡು ಬಾರಿ ಅಧಿಕಾರ ನಡೆಸಲು ಅವಕಾಶ ನೀಡಿದ್ದಕ್ಕಾಗಿ ತೆಲಂಗಾಣ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಇಂದಿನ ಫಲಿತಾಂಶದ ಬಗ್ಗೆ ಬೇಸರವಾಗಿಲ್ಲ, ಆದರೆ ಇದು ನಮಗೆ ನಿರೀಕ್ಷಿತವಾಗಿರುವುದರಿಂದ ಖಂಡಿತವಾಗಿಯೂ ನಿರಾಸೆಯಾಗಿದೆ. ಆದರೆ, ನಾವು ಇದನ್ನು ಎಚ್ಚರಿಕೆಯ ಹೆಜ್ಜೆಯನ್ನಾಗಿ ಪರಿಗಣಿಸುತ್ತೇವೆ ಮತ್ತು ಮತ್ತೆ ಪುಟಿದೇಳುತ್ತೇವೆ. ಜನಾದೇಶ ಪಡೆದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ನಿಮಗೆ ಶುಭವಾಗಲಿ' ಎಂದಿದ್ದಾರೆ.

'ಹ್ಯಾಟ್ರಿಕ್ ಲೋಡ್ ಆಗುತ್ತಿದೆ. 3.0ಗೆ ಸಂಭ್ರಮಾಚರಿಸಲು ಸಿದ್ಧರಾಗಿ' ಎಂದು ತಾವೇ ಮಾಡಿದ್ದ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ಅವರು, ನಾವು ನಿರೀಕ್ಷಿಸಿದ್ದು ಹುಸಿಯಾಗಿದೆ. ಇದು ತಪ್ಪು ಲೆಕ್ಕಾಚಾರವಾಗಿದೆ ಎಂದು ಬರೆದಿದ್ದಾರೆ. 

ಇಸಿಐನ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, 119 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 63 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಬಿಆರ್‌ಎಸ್ 40, ಬಿಜೆಪಿ 9, ಎಐಎಂಐಎಂ 6 ಮತ್ತು ಸಿಪಿಐ 1 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಜಯಭೇರಿ ಬಾರಿಸುತ್ತಿದೆ ಎಂಬುದು ಸ್ಪಷ್ಟವಾದ ನಂತರ ಹೈದರಾಬಾದ್‌ನಲ್ಲಿರುವ ಪಕ್ಷದ ಕಚೇರಿಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ರಾಜ್ಯಾಧ್ಯಕ್ಷ ರೇವಂತ್ ರೆಡ್ಡಿ ಪರವಾಗಿ 'ಸಿಎಂ-ಸಿಎಂ' ಎಂದು ಘೋಷಣೆಗಳನ್ನು ಕೂಗಿದರು.

ರೇವಂತ್ ರೆಡ್ಡಿ ಅವರು ರೋಡ್‌ಶೋ ಆರಂಭಿಸುತ್ತಿದ್ದಂತೆಯೇ ನೆರೆದಿದ್ದ ಅಪಾರ ಜನಸ್ತೋಮ ಪಕ್ಷದ ಧ್ವಜವನ್ನು ಬೀಸುತ್ತಾ ಅವರನ್ನು ಹುರಿದುಂಬಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!