ಬಂಧಿತ ಆರೋಪಿ ಆಶಿಕ್ 
ದೇಶ

ಗರ್ಲ್ ಫ್ರೆಂಡ್ ಕೊಂದು, ಡೆಡ್ ಬಾಡಿ ಫೋಟೋ ವಾಟ್ಸಾಪ್ ಸ್ಟೇಟಸ್‌ ಹಾಕಿದ್ದ ಪಾಪಿ ಬಂಧನ

ಸ್ನೇಹಿತೆಯನ್ನು ಹತ್ಯೆ ಮಾಡಿ, ಮೃತದೇಹದ ದೃಶ್ಯವನ್ನು ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿಕೊಂಡ ಕಿಡಿಗೇಡಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಕೃತ್ಯವೆಸಗಿದಾತನನ್ನು ಆಶಿಕ್‌ ಎಂದು ಗುರುತಿಸಲಾಗಿದೆ.

ಚೆನ್ನೈ: ಸ್ನೇಹಿತೆಯನ್ನು ಹತ್ಯೆ ಮಾಡಿ, ಮೃತದೇಹದ ದೃಶ್ಯವನ್ನು ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿಕೊಂಡ ಕಿಡಿಗೇಡಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಕೃತ್ಯವೆಸಗಿದಾತನನ್ನು ಆಶಿಕ್‌ ಎಂದು ಗುರುತಿಸ ಲಾಗಿದೆ.

ತಮಿಳುನಾಡಿನಲ್ಲಿ ವ್ಯಕ್ತಿಯೊಬ್ಬ, ತನ್ನ ಪ್ರಿಯತಮೆಯನ್ನು ಕೊಂದು, ಆಕೆಯ ಶವದ ಫೋಟೊವನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ಗೆ ಅಪ್‌ಡೇಟ್‌ ಮಾಡುವ ಮೂಲಕ ವಿಕೃತಿ ಮೆರೆದಿದ್ದಾನೆ.

ಮೃತ ಯುವತಿ ಕಾಲೇಜೊಂದರಲ್ಲಿ ನರ್ಸಿಂಗ್‌ ಅಧ್ಯಯನ ಮಾಡುತ್ತಿದ್ದಳು. ಐದು ವರ್ಷಗಳಿಂದ ಇಬ್ಬರು ಸ್ನೇಹಿತರಾಗಿದ್ದರು. ಮೂರು ದಿನಗಳಿಂದ ಯುವತಿ ತರಗತಿಗೆ ಹಾಜರಾಗದೇ ಇದ್ದದ್ದು ಆಕೆಯ ಗೆಳತಿಯರಲ್ಲಿ ಸಂಶಯಕ್ಕೆ ಕಾರಣವಾಯಿತು. ಈ ಬಗ್ಗೆ ಆಶಿಕ್‌ ಬಳಿ ವಿಚಾರಿಸಿದ್ದರು.

ದ್ವಿತೀಯ ವರ್ಷದ ನರ್ಸಿಂಗ್‌ ಅಧ್ಯಯನ ಮಾಡುತ್ತಿರುವ ಯುವತಿ ಹಾಗೂ ಆಶಿಕ್‌ ಕೆಲ ತಿಂಗಳಿಂದ ಪ್ರೀತಿಸುತ್ತಿದ್ದರು. ಕಳೆದ ಮೂರು ದಿನಗಳಿಂದ ಕಾಲೇಜಿಗೆ ಹೋಗದ ಯುವತಿಯು ಆಶಿಕ್‌ ಜತೆ ಹೋಟೆಲ್‌ನಲ್ಲಿ ತಂಗಿದ್ದಳು. ಯುವತಿಯ ಗೆಳತಿಯರು ಗಾಬರಿಗೊಂಡು ಪರಿಶೀಲಿಸಿದಾಗ, ಆಕೆ ಆಶಿಕ್‌ ಜತೆ ಚೆನ್ನೈ ಹೋಟೆಲ್‌ನಲ್ಲಿರುವುದು ಗೊತ್ತಾಗಿತ್ತು.

ಬಾಯ್‌ಫ್ರೆಂಡ್‌ ಜತೆ ಇದ್ದಾಳೆ ಎಂದು ಅವರೂ ಸುಮ್ಮನಾಗಿದ್ದರು. ಆದರೆ, ಆಶಿಕ್‌ ಹೋಟೆಲ್‌ನಲ್ಲಿ ಯುವತಿಯನ್ನು ಕೊಲೆ ಮಾಡಿದ್ದಾನೆ. ಯಾವಾಗ ಯುವತಿಯ ಶವದ ಫೋಟೊ ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಕಾಣಿಸಿತೋ, ಯುವತಿಯರು ಗಾಬರಿಗೊಂಡಿದ್ದಾರೆ.

ಹೋಟೆಲ್‌ನಲ್ಲಿ ಯುವತಿ ಜತೆ ಜಗಳ ನಡೆದಿದ್ದು, ಕೋಪದಲ್ಲಿ ಕೊಲೆ ಮಾಡಿದೆ ಎಂಬುದಾಗಿ ಬಂಧಿತ ಆಶಿಕ್‌ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ನಾನು ಬೇರೊಂದು ಯುವತಿ ಜತೆ ಸಂಬಂಧ ಇಟ್ಟುಕೊಂಡಿದ್ದೇನೆ ಎಂದು ಆಕೆ ಆರೋಪಿಸಿದಳು. ಇದೇ ವೇಳೆ ಇಬ್ಬರ ಮಧ್ಯೆ ಜಗಳ ನಡೆಯಿತು. ಆಗ ನಾನು ಟಿ ಶರ್ಟ್‌ನಿಂದ ಆಕೆಯ ಕತ್ತು ಹಿಸುಕಿದೆ” ಎಂಬುದಾಗಿ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT