ಬಂಧಿತ ಆರೋಪಿ ಆಶಿಕ್ 
ದೇಶ

ಗರ್ಲ್ ಫ್ರೆಂಡ್ ಕೊಂದು, ಡೆಡ್ ಬಾಡಿ ಫೋಟೋ ವಾಟ್ಸಾಪ್ ಸ್ಟೇಟಸ್‌ ಹಾಕಿದ್ದ ಪಾಪಿ ಬಂಧನ

ಸ್ನೇಹಿತೆಯನ್ನು ಹತ್ಯೆ ಮಾಡಿ, ಮೃತದೇಹದ ದೃಶ್ಯವನ್ನು ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿಕೊಂಡ ಕಿಡಿಗೇಡಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಕೃತ್ಯವೆಸಗಿದಾತನನ್ನು ಆಶಿಕ್‌ ಎಂದು ಗುರುತಿಸಲಾಗಿದೆ.

ಚೆನ್ನೈ: ಸ್ನೇಹಿತೆಯನ್ನು ಹತ್ಯೆ ಮಾಡಿ, ಮೃತದೇಹದ ದೃಶ್ಯವನ್ನು ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿಕೊಂಡ ಕಿಡಿಗೇಡಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಕೃತ್ಯವೆಸಗಿದಾತನನ್ನು ಆಶಿಕ್‌ ಎಂದು ಗುರುತಿಸ ಲಾಗಿದೆ.

ತಮಿಳುನಾಡಿನಲ್ಲಿ ವ್ಯಕ್ತಿಯೊಬ್ಬ, ತನ್ನ ಪ್ರಿಯತಮೆಯನ್ನು ಕೊಂದು, ಆಕೆಯ ಶವದ ಫೋಟೊವನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ಗೆ ಅಪ್‌ಡೇಟ್‌ ಮಾಡುವ ಮೂಲಕ ವಿಕೃತಿ ಮೆರೆದಿದ್ದಾನೆ.

ಮೃತ ಯುವತಿ ಕಾಲೇಜೊಂದರಲ್ಲಿ ನರ್ಸಿಂಗ್‌ ಅಧ್ಯಯನ ಮಾಡುತ್ತಿದ್ದಳು. ಐದು ವರ್ಷಗಳಿಂದ ಇಬ್ಬರು ಸ್ನೇಹಿತರಾಗಿದ್ದರು. ಮೂರು ದಿನಗಳಿಂದ ಯುವತಿ ತರಗತಿಗೆ ಹಾಜರಾಗದೇ ಇದ್ದದ್ದು ಆಕೆಯ ಗೆಳತಿಯರಲ್ಲಿ ಸಂಶಯಕ್ಕೆ ಕಾರಣವಾಯಿತು. ಈ ಬಗ್ಗೆ ಆಶಿಕ್‌ ಬಳಿ ವಿಚಾರಿಸಿದ್ದರು.

ದ್ವಿತೀಯ ವರ್ಷದ ನರ್ಸಿಂಗ್‌ ಅಧ್ಯಯನ ಮಾಡುತ್ತಿರುವ ಯುವತಿ ಹಾಗೂ ಆಶಿಕ್‌ ಕೆಲ ತಿಂಗಳಿಂದ ಪ್ರೀತಿಸುತ್ತಿದ್ದರು. ಕಳೆದ ಮೂರು ದಿನಗಳಿಂದ ಕಾಲೇಜಿಗೆ ಹೋಗದ ಯುವತಿಯು ಆಶಿಕ್‌ ಜತೆ ಹೋಟೆಲ್‌ನಲ್ಲಿ ತಂಗಿದ್ದಳು. ಯುವತಿಯ ಗೆಳತಿಯರು ಗಾಬರಿಗೊಂಡು ಪರಿಶೀಲಿಸಿದಾಗ, ಆಕೆ ಆಶಿಕ್‌ ಜತೆ ಚೆನ್ನೈ ಹೋಟೆಲ್‌ನಲ್ಲಿರುವುದು ಗೊತ್ತಾಗಿತ್ತು.

ಬಾಯ್‌ಫ್ರೆಂಡ್‌ ಜತೆ ಇದ್ದಾಳೆ ಎಂದು ಅವರೂ ಸುಮ್ಮನಾಗಿದ್ದರು. ಆದರೆ, ಆಶಿಕ್‌ ಹೋಟೆಲ್‌ನಲ್ಲಿ ಯುವತಿಯನ್ನು ಕೊಲೆ ಮಾಡಿದ್ದಾನೆ. ಯಾವಾಗ ಯುವತಿಯ ಶವದ ಫೋಟೊ ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಕಾಣಿಸಿತೋ, ಯುವತಿಯರು ಗಾಬರಿಗೊಂಡಿದ್ದಾರೆ.

ಹೋಟೆಲ್‌ನಲ್ಲಿ ಯುವತಿ ಜತೆ ಜಗಳ ನಡೆದಿದ್ದು, ಕೋಪದಲ್ಲಿ ಕೊಲೆ ಮಾಡಿದೆ ಎಂಬುದಾಗಿ ಬಂಧಿತ ಆಶಿಕ್‌ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ನಾನು ಬೇರೊಂದು ಯುವತಿ ಜತೆ ಸಂಬಂಧ ಇಟ್ಟುಕೊಂಡಿದ್ದೇನೆ ಎಂದು ಆಕೆ ಆರೋಪಿಸಿದಳು. ಇದೇ ವೇಳೆ ಇಬ್ಬರ ಮಧ್ಯೆ ಜಗಳ ನಡೆಯಿತು. ಆಗ ನಾನು ಟಿ ಶರ್ಟ್‌ನಿಂದ ಆಕೆಯ ಕತ್ತು ಹಿಸುಕಿದೆ” ಎಂಬುದಾಗಿ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT