ಪ್ರಹ್ಲಾದ್ ಜೋಶಿ 
ದೇಶ

ಕಾಂಗ್ರೆಸ್ ನ ಸುಳ್ಳು ಭರವಸೆಗಳನ್ನು ಜನರು ತಿರಸ್ಕರಿಸಿದ್ದಾರೆ: ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಕಾಂಗ್ರೆಸ್​ನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ಬಿಆರ್ ಎಸ್ ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ ಎಂದು ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಹ್ಲಾದ್‌ಜೋಶಿ ಸುದ್ದಿಗೋಷ್ಠಿಯಲ್ಲಿ ಇಂದು ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್​ನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ಬಿಆರ್ ಎಸ್ ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ ಎಂದು ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಹ್ಲಾದ್‌ಜೋಶಿ ಸುದ್ದಿಗೋಷ್ಠಿಯಲ್ಲಿ ಇಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ದುರಾಡಳಿತ ಬಗ್ಗೆ ಜನರಿಗೆ ತಿಳಿಸಿದ್ದೆವು. ಬಿಜೆಪಿಯ ಹಿರಿಯ ನಾಯಕರು ಒಟ್ಟಾಗಿ ಕೆಲಸ ಮಾಡಿದ್ದೆವು. ರಾಜಸ್ಥಾನದಲ್ಲಿ 124ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಮಧ್ಯಪ್ರದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡಿದೆ ಎಂದರು.

ತೆಲಂಗಾಣದಲ್ಲಿ ಬಿಆರ್​ಎಸ್​​ನಿಂದ ಆಪರೇಷನ್​ ಭೀತಿ ಹಿನ್ನೆಲೆ ಕರ್ನಾಟಕದಲ್ಲಿ ಕಾಂಗ್ರೆಸ್​ನಿಂದ 17 ಜನರನ್ನು ಯಾರು ಕಳಿಸಿದರು ಎಂದು ಕಿಡಿಕಾರಿದರು.

ಸಿದ್ದರಾಮಯ್ಯಗೆ ಕುಮಾರಸ್ವಾಮಿ ಕುಟುಂಬ ಕಂಡರೆ ದ್ವೇಷ ಇದೆ. ಈ ಹಿಂದೆ ಕಾಂಗ್ರೆಸ್​ನವರೇ ಶಾಸಕರನ್ನು ಕಳುಹಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ನಿಂದ ಜ್ಯೋತಿರಾದಿತ್ಯ ಏಕೆ ಬಂದರು. ಕಾಂಗ್ರೆಸ್​ನಲ್ಲೇ ಆಂತರಿಕ ಸಮಸ್ಯೆ ಇದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ 6 ತಿಂಗಳಲ್ಲೇ ಜಗಳವಾಡುತ್ತಿದ್ದಾರೆ ಎಂದು ಪ್ರಹ್ಲಾದ್​ ಜೋಶಿ ಕಿಡಿಕಾರಿದರು.

ವಿಜಯೇಂದ್ರ ಭೇಟಿ ಅಭಿನಂದನೆ: ರಾಜಸ್ಥಾನ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ಪ್ರಹ್ಲಾದ್ ಜೋಶಿಯವರನ್ನು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಬಿ ವೈ ವಿಜಯೇಂದ್ರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT