ಪ್ರಹ್ಲಾದ್ ಜೋಶಿ 
ದೇಶ

ಕಾಂಗ್ರೆಸ್ ನ ಸುಳ್ಳು ಭರವಸೆಗಳನ್ನು ಜನರು ತಿರಸ್ಕರಿಸಿದ್ದಾರೆ: ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಕಾಂಗ್ರೆಸ್​ನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ಬಿಆರ್ ಎಸ್ ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ ಎಂದು ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಹ್ಲಾದ್‌ಜೋಶಿ ಸುದ್ದಿಗೋಷ್ಠಿಯಲ್ಲಿ ಇಂದು ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್​ನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ಬಿಆರ್ ಎಸ್ ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ ಎಂದು ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಹ್ಲಾದ್‌ಜೋಶಿ ಸುದ್ದಿಗೋಷ್ಠಿಯಲ್ಲಿ ಇಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ದುರಾಡಳಿತ ಬಗ್ಗೆ ಜನರಿಗೆ ತಿಳಿಸಿದ್ದೆವು. ಬಿಜೆಪಿಯ ಹಿರಿಯ ನಾಯಕರು ಒಟ್ಟಾಗಿ ಕೆಲಸ ಮಾಡಿದ್ದೆವು. ರಾಜಸ್ಥಾನದಲ್ಲಿ 124ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಮಧ್ಯಪ್ರದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡಿದೆ ಎಂದರು.

ತೆಲಂಗಾಣದಲ್ಲಿ ಬಿಆರ್​ಎಸ್​​ನಿಂದ ಆಪರೇಷನ್​ ಭೀತಿ ಹಿನ್ನೆಲೆ ಕರ್ನಾಟಕದಲ್ಲಿ ಕಾಂಗ್ರೆಸ್​ನಿಂದ 17 ಜನರನ್ನು ಯಾರು ಕಳಿಸಿದರು ಎಂದು ಕಿಡಿಕಾರಿದರು.

ಸಿದ್ದರಾಮಯ್ಯಗೆ ಕುಮಾರಸ್ವಾಮಿ ಕುಟುಂಬ ಕಂಡರೆ ದ್ವೇಷ ಇದೆ. ಈ ಹಿಂದೆ ಕಾಂಗ್ರೆಸ್​ನವರೇ ಶಾಸಕರನ್ನು ಕಳುಹಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ನಿಂದ ಜ್ಯೋತಿರಾದಿತ್ಯ ಏಕೆ ಬಂದರು. ಕಾಂಗ್ರೆಸ್​ನಲ್ಲೇ ಆಂತರಿಕ ಸಮಸ್ಯೆ ಇದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ 6 ತಿಂಗಳಲ್ಲೇ ಜಗಳವಾಡುತ್ತಿದ್ದಾರೆ ಎಂದು ಪ್ರಹ್ಲಾದ್​ ಜೋಶಿ ಕಿಡಿಕಾರಿದರು.

ವಿಜಯೇಂದ್ರ ಭೇಟಿ ಅಭಿನಂದನೆ: ರಾಜಸ್ಥಾನ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ಪ್ರಹ್ಲಾದ್ ಜೋಶಿಯವರನ್ನು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಬಿ ವೈ ವಿಜಯೇಂದ್ರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT