ಪ್ರಹ್ಲಾದ್ ಜೋಶಿ 
ದೇಶ

ಕಾಂಗ್ರೆಸ್ ನ ಸುಳ್ಳು ಭರವಸೆಗಳನ್ನು ಜನರು ತಿರಸ್ಕರಿಸಿದ್ದಾರೆ: ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಕಾಂಗ್ರೆಸ್​ನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ಬಿಆರ್ ಎಸ್ ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ ಎಂದು ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಹ್ಲಾದ್‌ಜೋಶಿ ಸುದ್ದಿಗೋಷ್ಠಿಯಲ್ಲಿ ಇಂದು ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್​ನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ಬಿಆರ್ ಎಸ್ ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ ಎಂದು ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಹ್ಲಾದ್‌ಜೋಶಿ ಸುದ್ದಿಗೋಷ್ಠಿಯಲ್ಲಿ ಇಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ದುರಾಡಳಿತ ಬಗ್ಗೆ ಜನರಿಗೆ ತಿಳಿಸಿದ್ದೆವು. ಬಿಜೆಪಿಯ ಹಿರಿಯ ನಾಯಕರು ಒಟ್ಟಾಗಿ ಕೆಲಸ ಮಾಡಿದ್ದೆವು. ರಾಜಸ್ಥಾನದಲ್ಲಿ 124ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಮಧ್ಯಪ್ರದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡಿದೆ ಎಂದರು.

ತೆಲಂಗಾಣದಲ್ಲಿ ಬಿಆರ್​ಎಸ್​​ನಿಂದ ಆಪರೇಷನ್​ ಭೀತಿ ಹಿನ್ನೆಲೆ ಕರ್ನಾಟಕದಲ್ಲಿ ಕಾಂಗ್ರೆಸ್​ನಿಂದ 17 ಜನರನ್ನು ಯಾರು ಕಳಿಸಿದರು ಎಂದು ಕಿಡಿಕಾರಿದರು.

ಸಿದ್ದರಾಮಯ್ಯಗೆ ಕುಮಾರಸ್ವಾಮಿ ಕುಟುಂಬ ಕಂಡರೆ ದ್ವೇಷ ಇದೆ. ಈ ಹಿಂದೆ ಕಾಂಗ್ರೆಸ್​ನವರೇ ಶಾಸಕರನ್ನು ಕಳುಹಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ನಿಂದ ಜ್ಯೋತಿರಾದಿತ್ಯ ಏಕೆ ಬಂದರು. ಕಾಂಗ್ರೆಸ್​ನಲ್ಲೇ ಆಂತರಿಕ ಸಮಸ್ಯೆ ಇದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ 6 ತಿಂಗಳಲ್ಲೇ ಜಗಳವಾಡುತ್ತಿದ್ದಾರೆ ಎಂದು ಪ್ರಹ್ಲಾದ್​ ಜೋಶಿ ಕಿಡಿಕಾರಿದರು.

ವಿಜಯೇಂದ್ರ ಭೇಟಿ ಅಭಿನಂದನೆ: ರಾಜಸ್ಥಾನ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ಪ್ರಹ್ಲಾದ್ ಜೋಶಿಯವರನ್ನು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಬಿ ವೈ ವಿಜಯೇಂದ್ರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ