ಪ್ರಹ್ಲಾದ್ ಜೋಶಿ 
ದೇಶ

ಕಾಂಗ್ರೆಸ್ ನ ಸುಳ್ಳು ಭರವಸೆಗಳನ್ನು ಜನರು ತಿರಸ್ಕರಿಸಿದ್ದಾರೆ: ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಕಾಂಗ್ರೆಸ್​ನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ಬಿಆರ್ ಎಸ್ ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ ಎಂದು ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಹ್ಲಾದ್‌ಜೋಶಿ ಸುದ್ದಿಗೋಷ್ಠಿಯಲ್ಲಿ ಇಂದು ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್​ನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. ಬಿಆರ್ ಎಸ್ ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ ಎಂದು ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಹ್ಲಾದ್‌ಜೋಶಿ ಸುದ್ದಿಗೋಷ್ಠಿಯಲ್ಲಿ ಇಂದು ಹೇಳಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ದುರಾಡಳಿತ ಬಗ್ಗೆ ಜನರಿಗೆ ತಿಳಿಸಿದ್ದೆವು. ಬಿಜೆಪಿಯ ಹಿರಿಯ ನಾಯಕರು ಒಟ್ಟಾಗಿ ಕೆಲಸ ಮಾಡಿದ್ದೆವು. ರಾಜಸ್ಥಾನದಲ್ಲಿ 124ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಮಧ್ಯಪ್ರದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡಿದೆ ಎಂದರು.

ತೆಲಂಗಾಣದಲ್ಲಿ ಬಿಆರ್​ಎಸ್​​ನಿಂದ ಆಪರೇಷನ್​ ಭೀತಿ ಹಿನ್ನೆಲೆ ಕರ್ನಾಟಕದಲ್ಲಿ ಕಾಂಗ್ರೆಸ್​ನಿಂದ 17 ಜನರನ್ನು ಯಾರು ಕಳಿಸಿದರು ಎಂದು ಕಿಡಿಕಾರಿದರು.

ಸಿದ್ದರಾಮಯ್ಯಗೆ ಕುಮಾರಸ್ವಾಮಿ ಕುಟುಂಬ ಕಂಡರೆ ದ್ವೇಷ ಇದೆ. ಈ ಹಿಂದೆ ಕಾಂಗ್ರೆಸ್​ನವರೇ ಶಾಸಕರನ್ನು ಕಳುಹಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ನಿಂದ ಜ್ಯೋತಿರಾದಿತ್ಯ ಏಕೆ ಬಂದರು. ಕಾಂಗ್ರೆಸ್​ನಲ್ಲೇ ಆಂತರಿಕ ಸಮಸ್ಯೆ ಇದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ 6 ತಿಂಗಳಲ್ಲೇ ಜಗಳವಾಡುತ್ತಿದ್ದಾರೆ ಎಂದು ಪ್ರಹ್ಲಾದ್​ ಜೋಶಿ ಕಿಡಿಕಾರಿದರು.

ವಿಜಯೇಂದ್ರ ಭೇಟಿ ಅಭಿನಂದನೆ: ರಾಜಸ್ಥಾನ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ಪ್ರಹ್ಲಾದ್ ಜೋಶಿಯವರನ್ನು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಬಿ ವೈ ವಿಜಯೇಂದ್ರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT