ತಮಿಳಿಸೈ ಸೌಂದರರಾಜನ್-ಕೆ ಚಂದ್ರಶೇಖರ್ ರಾವ್ 
ದೇಶ

CM KCR Resign: ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ. ಚಂದ್ರಶೇಖರ್ ರಾವ್

ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲ ತಮಿಳಿಸೈ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. 

ಹೈದರಾಬಾದ್: ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲ ತಮಿಳಿಸೈ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. 

ಕೆಸಿಆರ್ ತಮ್ಮ ಸ್ವಂತ ವಾಹನದಲ್ಲಿ ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದರು. ಇತ್ತೀಚಿನ ತೆಲಂಗಾಣ ಚುನಾವಣಾ ಫಲಿತಾಂಶದಲ್ಲಿ ಬಿಆರ್‌ಎಸ್ ಸೋಲು ಕಂಡಿದೆ.

ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಕೆಸಿಆರ್ ಒಂದು ಸ್ಥಾನದಲ್ಲಿ ಗೆದ್ದು ಎರಡನೇ ಸ್ಥಾನದಲ್ಲಿ ಸೋಲು ಅನುಭವಿಸಿದ್ದಾರೆ. ಗಜ್ವೆಲ್‌ನಲ್ಲಿ ಗೆದ್ದರೆ, ಕಾಮರೆಡ್ಡಿಯಲ್ಲಿ ಸೋತಿದ್ದರು. ಎಲ್ಲಾ ಇತ್ತೀಚಿನ ಫಲಿತಾಂಶಗಳೊಂದಿಗೆ ಬಿಆರ್ ಎಸ್ ಪಕ್ಷ ಪಲ್ಟಿಯಾಗಿದೆ. ಅನಿರೀಕ್ಷಿತ ಫಲಿತಾಂಶಗಳಿಂದ ಗುಲಾಬಿ ಶ್ರೇಣಿಗಳು ಹತಾಶೆಯಲ್ಲಿ ಮುಳುಗಿದೆ.

ತೆಲಂಗಾಣದಲ್ಲಿ ಚುನಾವಣಾ ಫಲಿತಾಂಶದ ಕುತೂಹಲ ಕೊನೆ ಹಂತಕ್ಕೆ ಬಂದಿದೆ. ಕಾಂಗ್ರೆಸ್ ಇದುವರೆಗೆ 60 ಸ್ಥಾನಗಳನ್ನು ಗೆದ್ದಿದ್ದು ನಾಲ್ಕು ಸ್ಥಾನಗಳಲ್ಲಿ ಪಕ್ಷ ಮುನ್ನಡೆ ಸಾಧಿಸಿದೆ. ಇನ್ನು ತೆಲಂಗಾಣ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರೇವಂತ್ ರೆಡ್ಡಿ ಅವರು ತೆಲಂಗಾಣದ ಸಿಎಂ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT