ರಾಹುಲ್ ಗಾಂಧಿ, ರೇವಂತ್ ರೆಡ್ಡಿ 
ದೇಶ

ತೆಲಂಗಾಣ: ಡಿ. 4 ಅಥವಾ 9ಕ್ಕೆ ಕಾಂಗ್ರೆಸ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಡಿಸೆಂಬರ್ 4 ಅಥವಾ 9 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭದ್ರತಾ ವ್ಯವಸ್ಥೆ ಮಾಡುವಂತೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ  ಕೇಳಿಕೊಂಡಿದ್ದಾರೆ ಎಂದು ತೆಲಂಗಾಣ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಹೈದ್ರಾಬಾದ್: ಡಿಸೆಂಬರ್ 4 ಅಥವಾ 9 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭದ್ರತಾ ವ್ಯವಸ್ಥೆ ಮಾಡುವಂತೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ  ಕೇಳಿಕೊಂಡಿದ್ದಾರೆ ಎಂದು ತೆಲಂಗಾಣ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ರೆಡ್ಡಿ ಅವರು ಡಿಜಿಪಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಎಡಿಜಿ ಸಿಐಡಿ ಅವರನ್ನು ಕರೆದು ಚರ್ಚಿಸಿದ್ದು, ಪ್ರಮಾಣ ವಚನ ಸಮಾರಂಭದ ಸಿದ್ಧತೆ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ತೆಲಂಗಾಣ ಪೊಲೀಸ್ ಪ್ರಕಟಣೆ ತಿಳಿಸಿದೆ. 

ತಮ್ಮ ಪಕ್ಷವು ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಬಗ್ಗೆ ಚರ್ಚಿಸಲಿದೆ ಎಂದು ರೆಡ್ಡಿ ಅವರಿಗೆ ತಿಳಿಸಿದ್ದಾರೆ.  'ಇಂದು ಸಂಜೆಯಿಂದ ಶುಭ ಮುಹೂರ್ತ ಆರಂಭವಾಗಲಿದೆ ಎಂದು ಪಿಟಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ಹಾಗಾಗೀ, ಸಾಧ್ಯವಾದರೆ ನಾಳೆ ಅಥವಾ ಡಿಸೆಂಬರ್ 9ರಂದು ಪ್ರಮಾಣ ವಚನ ಸ್ವೀಕರಿಸಬಹುದು ಎಂದು ಅದು ಹೇಳಿದೆ.

ಎಲ್ ಬಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು,ಇದರಲ್ಲಿ ದೆಹಲಿಯ ಹಿರಿಯ ನಾಯಕರಲ್ಲದೆ ಹಲವು ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ರೆಡ್ಡಿ ಡಿಜಿಪಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT