ರೇವಂತ ರೆಡ್ಡಿ ಅವರೊಂದಿಗೆ ತೆಲಂಗಾಣ ಡಿಜಿ ಮತ್ತು ಐಜಿಪಿ 
ದೇಶ

ತೆಲಂಗಾಣ ಡಿಜಿ, ಐಜಿಪಿ ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ!

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಹೈದ್ರಾಬಾದ್: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಪೂರ್ಣ ಪ್ರಮಾಣದ ಚುನಾವಣಾ ಫಲಿತಾಂಶ ಬರುವ ಮುನ್ನವೇ ಡಿಜಿಪಿ ಅಂಜನಿ ಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಹೈದರಾಬಾದ್‌ನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಶುಭಾಶಯ ಕೋರಿದ್ದರು. 

ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ಮತ್ತು ನೋಡಲ್ (ವೆಚ್ಚ) ಮಹೇಶ್ ಭಾಗವತ್ ಅವರೊಂದಿಗೆ ಅನುಮುಲಾ ರೇವಂತ್ ರೆಡ್ಡಿ ಅವರನ್ನು ಹೈದರಾಬಾದ್‌ನ ನಿವಾಸದಲ್ಲಿ ಭೇಟಿಯಾಗಿದ್ದ ಡಿಜಿ ಮತ್ತು ಐಜಿಪಿ ಹೂ ಗುಚ್ಚ ನೀಡುವ ಮೂಲಕ ಶುಭಾಶಯ ಕೋರಿದರು.  ಇದು ಚುನಾವಣಾ ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿರುವ ಆಯೋಗ, ತಕ್ಷಣವೇ ಜಾರಿಗೆ ಬರುವಂತೆ  ಡಿಜಿ ಮತ್ತು ಐಜಿಪಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. 

ತೆಲಂಗಾಣ ರಾಜ್ಯದ ಒಟ್ಟು 119 ಸ್ಥಾನಗಳ ಪೈಕಿ 65 ಸ್ಥಾನಗಳಲ್ಲಿ ಕಾಂಗ್ರೆಸ್  ಪಕ್ಷ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಬಿಆರ್‌ಎಸ್ 38 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT