ಹಿಂಸಾಚಾರ ನಡೆದ ಪ್ರದೇಶದಲ್ಲಿ ಸೇನಾ ಸಿಬ್ಬಂದಿ 
ದೇಶ

ಮಣಿಪುರದಲ್ಲಿ ಮ್ಯಾನ್ಮಾರ್ ಗಡಿ ಭಾಗದಲ್ಲಿ 13 ಶವ ಪತ್ತೆ: ಉಗ್ರರದ್ದೆಂಬ ಶಂಕೆ!

ಮಣಿಪುರದಲ್ಲಿನ ಮ್ಯಾನ್ಮಾರ್ ಗಡಿ ಭಾಗದಲ್ಲಿ 13 ಮಂದಿಯ ಶವ ಪತ್ತೆಯಾಗಿದ್ದು, ಇವರನ್ನು ಉಗ್ರರೆಂದು ಶಂಕಿಸಲಾಗಿದೆ.

ಮಣಿಪುರ: ಮಣಿಪುರದಲ್ಲಿನ ಮ್ಯಾನ್ಮಾರ್ ಗಡಿ ಭಾಗದಲ್ಲಿ 13 ಮಂದಿಯ ಶವ ಪತ್ತೆಯಾಗಿದ್ದು, ಇವರನ್ನು ಉಗ್ರರೆಂದು ಶಂಕಿಸಲಾಗಿದೆ.

ತೆಂಗನೌಪಾಲ್ ಜಿಲ್ಲೆಯಲ್ಲಿ ಈ ಶವಗಳು ಪತ್ತೆಯಾಗಿದ್ದು, ಈ ಪ್ರದೇಶ ಮ್ಯಾನ್ಮಾರ್ ನೊಂದಿಗೆ ಗಡಿ ಹಂಚಿಕೊಂಡಿದೆ. ಇದು ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರದಿಂದ ಪ್ರಭಾವಿತವಾದ ಜಿಲ್ಲೆಗಳಲ್ಲಿ ಒಂದಾಗಿದೆ.

ವರದಿಗಳ ಪ್ರಕಾರ ಸೋಮವಾರದಂದು ಜಿಲ್ಲೆಯ ಲೀತು ಎಂಬ ಗ್ರಾಮದಲ್ಲಿ ಉಗ್ರರು ತಮ್ಮ ನೆಲೆಗಳನ್ನು ಹೊಂದಿರುವ ಮ್ಯಾನ್ಮಾರ್‌ಗೆ ತೆರಳುತ್ತಿದ್ದಾಗ  ಗುಂಡಿನ ಚಕಮಕಿ ನಡೆದಿದೆ. ಈ ವೇಳೆ 13 ಮಂದಿ ಮೃತಪಟ್ಟಿದ್ದಾರೆ.

ಮೃತದೇಹಗಳು ಪತ್ತೆಯಾಗಿರುವುದನ್ನು ಪೊಲೀಸ್ ಮಹಾನಿರ್ದೇಶಕ ರಾಜೀಬ್ ಸಿಂಗ್ ಖಚಿತಪಡಿಸಿದ್ದಾರೆ. ಮೃತದೇಹಗಳನ್ನು ಇನ್ನೂ ಗುರುತಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

"ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬುದು ನಿಜ ಆದರೆ ಅವರು ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾರೆಯೇ ಎಂಬುದು ನಮಗೆ ತಿಳಿದಿಲ್ಲ. ತನಿಖೆಯ ನಂತರ ನಾವು ಅದನ್ನು ತಿಳಿಯುತ್ತೇವೆ ಎಂದು ಸಿಂಗ್ ಈ ಪತ್ರಿಕೆ ನೀಡಿದ್ದಾರೆ.

ಮೇ 3 ರಂದು ಮಣಿಪುರದಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದ ಸುಮಾರು 200 ಜನರು ಸಾವನ್ನಪ್ಪಿದ್ದರೆ, 60,000 ಜನರು ಇದೇ ಕಾರಣದಿಂದ ಸ್ಥಳಾಂತರಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT