ಸಾಂದರ್ಭಿಕ ಚಿತ್ರ 
ದೇಶ

ಒಡಿಶಾ: ದಲಿತ ಯುವತಿ ಮೇಲೆ ಬ್ಯೂಟಿ ಪಾರ್ಲರ್ ಮಾಲೀಕನಿಂದ ಅತ್ಯಾಚಾರ, ಬ್ಲ್ಯಾಕ್ ಮೇಲ್

22 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ ಎಸಗಿ ಆಕೆಯ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡುತ್ತಿರುವ ಆರೋಪದ ಮೇಲೆ ಬ್ಯೂಟಿ ಪಾರ್ಲರ್ ಮಾಲೀಕನನ್ನು ಪಟ್ಟಮುಂಡೈ ಪೊಲೀಸರು ಭಾನುವಾರ..

ಕೇಂದ್ರಪಾರ: 22 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ ಎಸಗಿ ಆಕೆಯ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡುತ್ತಿರುವ ಆರೋಪದ ಮೇಲೆ ಬ್ಯೂಟಿ ಪಾರ್ಲರ್ ಮಾಲೀಕನನ್ನು ಒಡಿಶಾದ ಪಟ್ಟಮುಂಡೈ ಪೊಲೀಸರು ಭಾನುವಾರ ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ನೀಲಿಕಂಠ ಗ್ರಾಮದ 35 ವರ್ಷದ ಪ್ರತಾಪ್ ಸಾಹೂ ಎಂದು ಗುರುತಿಸಲಾಗಿದೆ.

ಪಟ್ಟಮುಂಡೈ ಐಐಸಿ ರಂಜಿತ್ ಮೊಹಂತಿ ಮಾತನಾಡಿ, ಆರೋಪಿಯು ಕೆಲವು ತಿಂಗಳ ಹಿಂದೆ ಸಂತ್ರಸ್ತೆಯ ಜೊತೆ ಸ್ನೇಹ ಬೆಳೆಸಿ ಚೌಡಕುಲತ್‌ನಲ್ಲಿರುವ ತನ್ನ ಬ್ಯೂಟಿ ಪಾರ್ಲರ್‌ನಲ್ಲಿ ಆಕೆಗೆ ಕೆಲಸ ಕೊಡಿಸಿದ್ದು, ಕಳೆದ ತಿಂಗಳು, ಪಾರ್ಲರ್‌ನೊಳಗೆ ನಿದ್ದೆ ಮಾತ್ರೆ ಬೆರೆಸಿದ ತಂಪು ಪಾನೀಯ ನೀಡಿ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯ ನಗ್ನ ಚಿತ್ರ ಮತ್ತು ವೀಡಿಯೋಗಳನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾನೆ.

ಸಂತ್ರಸ್ತೆ ಪ್ರಜ್ಞೆ ಬಂದಾಗ ಆಕೆಗೆ ಖಾಸಗಿ ಫೋಟೋಗಳನ್ನು ತೋರಿಸಿ ಬ್ಲಾಕ್ ಮೇಲ್ ಮಾಡಿ, ಸುಮಾರು ಒಂದು ತಿಂಗಳ ಕಾಲ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಏನಾದ್ರೂ ಬಹಿರಂಗ ಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಸಹ ಹಾಕಿದ್ದಾನೆ.

ಕಳೆದ ವಾರ, ಮಹಿಳೆ ಸಾಹೂ ಅವರ ಅಂಗಡಿಯನ್ನು ತೊರೆದು ಕೇಂದ್ರಪಾರ ಪಟ್ಟಣದ ಮತ್ತೊಂದು ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಆಕೆಯ ಕೃತ್ಯದ ಬಗ್ಗೆ ಕೋಪಗೊಂಡ ಆರೋಪಿ ಶನಿವಾರ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಮತ್ತು ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಅದೇ ದಿನ, ಮಹಿಳೆ ಪಟ್ಟಮುಂಡೈ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿ ವಿರುದ್ಧ ಐಪಿಸಿಯ ಸೆಕ್ಷನ್ 376, 420 ಮತ್ತು 506, ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಮತ್ತು 67 ಮತ್ತು ಎಸ್‌ಸಿ ಮತ್ತು ಎಸ್‌ಟಿ(ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 ಅಡಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT