ಸಾಂದರ್ಭಿಕ ಚಿತ್ರ 
ದೇಶ

ಮಿಚಾಂಗ್ ಚಂಡಮಾರುತ ಎಫೆಕ್ಟ್: 33 ವಿಮಾನಗಳು ಚೆನ್ನೈನಿಂದ ಬೆಂಗಳೂರಿಗೆ ಡೈವರ್ಟ್

ಮಿಚಾಂಗ್ ಚಂಡಮಾರುತದ ಪ್ರಭಾವದಿಂದ ತಮಿಳುನಾಡು ರಾಜಧಾನಿ ಮತ್ತು ನೆರೆಯ  ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಚೆನ್ನೈ ವಿಮಾನ ನಿಲ್ದಾಣ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ 33 ವಿಮಾನಗಳನ್ನು ಚೆನ್ನೈನಿಂದ...

ಬೆಂಗಳೂರು: ಮಿಚಾಂಗ್ ಚಂಡಮಾರುತದ ಪ್ರಭಾವದಿಂದ ತಮಿಳುನಾಡು ರಾಜಧಾನಿ ಮತ್ತು ನೆರೆಯ  ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಚೆನ್ನೈ ವಿಮಾನ ನಿಲ್ದಾಣ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ 33 ವಿಮಾನಗಳನ್ನು ಚೆನ್ನೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ(ಕೆಐಎ) ಡೈವರ್ಟ್ ಮಾಡಲಾಗಿದೆ.

ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್(ಬಿಐಎಎಲ್) ಅಧಿಕಾರಿಗಳ ಪ್ರಕಾರ, ಚೆನ್ನೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿದ್ದ ಇಂಡಿಗೋ, ಸ್ಪೈಸ್‌ಜೆಟ್, ಇತಿಹಾದ್, ಲುಫ್ಥಾನ್ಸಾ ಮತ್ತು ಗಲ್ಫ್ ಏರ್ ಸೇರಿದಂತೆ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳನ್ನು ಚೆನ್ನೈನಿಂದ ಬೆಂಗಳೂರಿಗೆ ಡೈವರ್ಟ್ ಮಾಡಲಾಗಿದೆ ಮತ್ತು ಅನೇಕ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಹವಾಮಾನ ವೈಪರೀತ್ಯದಿಂದಾಗಿ ಚೆನ್ನೈ ವಿಮಾನ ನಿಲ್ದಾಣವನ್ನು ಸೋಮವಾರ ರಾತ್ರಿ 11 ಗಂಟೆಯವರೆಗೆ ಆಗಮನ ಮತ್ತು ನಿರ್ಗಮನ ಕಾರ್ಯಾಚರಣೆ ಬಂದ್ ಮಾಡಲಾಗಿದೆ.

ನಿರಂತರ ಮಳೆಯಿಂದಾಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ಹೊರಡುವ 70 ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಚೆನ್ನೈ ಮಾತ್ರವಲ್ಲ, ತಿರುಪತಿ, ವಿಶಾಖಪಟ್ಟಣಂ ಈ ಎಲ್ಲಾ ಪ್ರದೇಶಗಳಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಹಲವಾರು ವಿಮಾನಗಳು ವಿಳಂಬವಾಗುತ್ತಿವೆ ಮತ್ತು ರದ್ದುಗೊಳ್ಳುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!