ಖರ್ಗೆ 
ದೇಶ

ಇಂದು ಖರ್ಗೆ ಚೇಂಬರ್‌ನಲ್ಲಿ INDIA ನಾಯಕರ ಸಭೆ

ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ INDIA ಮೈತ್ರಿಕೂಟದ ವಿವಿಧ ವಿರೋಧ ಪಕ್ಷಗಳ ನಾಯಕರು ಉಭಯ ಸದನಗಳಲ್ಲಿ ತಮ್ಮ ಕಾರ್ಯತಂತ್ರವನ್ನು ರೂಪಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಇಂದು  ಭೇಟಿಯಾಗಲಿದ್ದಾರೆ.

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ INDIA ಮೈತ್ರಿಕೂಟದ ವಿವಿಧ ವಿರೋಧ ಪಕ್ಷಗಳ ನಾಯಕರು ಉಭಯ ಸದನಗಳಲ್ಲಿ ತಮ್ಮ ಕಾರ್ಯತಂತ್ರವನ್ನು ರೂಪಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಇಂದು  ಭೇಟಿಯಾಗಲಿದ್ದಾರೆ.

 INDIA ಮೈತ್ರಿಕೂಟದ ವಿವಿಧ ನಾಯಕರು ಸಂಸತ್ ಭವನದಲ್ಲಿರುವ ಖರ್ಗೆ ಅವರ ಚೇಂಬರ್‌ನಲ್ಲಿ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಸರ್ಕಾರವನ್ನು ತರಾಟೆಗ ತೆಗೆದುಕೊಳ್ಳಲು ಉಭಯ ಸದನಗಳಲ್ಲಿ ಜಂಟಿ ಕಾರ್ಯತಂತ್ರವನ್ನು ರೂಪಿಸಲು ವಿರೋಧ ಪಕ್ಷದ ನಾಯಕರು ಸಂಸತ್ತಿನ ಅಧಿವೇಶನಗಳಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. ಮೊದಲ ದಿನವೇ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ಉಚ್ಚಾಟನೆ ಮಾಡುವ ಸಾಧ್ಯತೆ ಇರುವುದರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಬಿರುಸಿನಿಂದ ಆರಂಭವಾಗುವ ಸಾಧ್ಯತೆ ಇದೆ.

ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೆ ಇದು ಕೊನೆಯ ಪೂರ್ಣ ಅಧಿವೇಶನವಾಗಿದೆ ಮತ್ತು ಚಳಿಗಾಲದ ಅಧಿವೇಶನದಲ್ಲಿ ಎಲ್ಲಾ ಬಾಕಿ ಇರುವ ಬಿಲ್ ಗಳನ್ನು ತೆರವುಗೊಳಿಸಲು ಬಿಜೆಪಿ ಬಯಸಿದೆ.  ಸಂಸತ್ತಿನ ಮುಂದೆ ಬಾಕಿ ಉಳಿದಿರುವ ಮಸೂದೆಗಳಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕದ ಮಸೂದೆಯ ಜೊತೆಗೆ ಐಪಿಸಿ, ಕ್ರಿಮಿನಲ್ ದಂಡ ಸಂಹಿತೆ ಮತ್ತು ಸಾಕ್ಷಿ ಕಾಯ್ದೆಯನ್ನು ಬದಲಿಸುವ ಹೊಸ ಮಸೂದೆಗಳು ಸೇರಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT