INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್ 
ದೇಶ

ಪ್ರಮುಖ ನಾಯಕರ ಗೈರು ಸಾಧ್ಯತೆ: INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್

ಪ್ರಮುಖ ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆಯಲ್ಲಿ ನಾಳೆ ಅಂದರೆ ಬುಧವಾರ ನಡೆಯಬೇಕಿದ್ದ INDIA ಮಿತ್ರಕೂಟದ ಸಭೆಯನ್ನು ಮುಂದೂಡಲಾಗಿದೆ.

ನವದೆಹಲಿ: ಪ್ರಮುಖ ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆಯಲ್ಲಿ ನಾಳೆ ಅಂದರೆ ಬುಧವಾರ ನಡೆಯಬೇಕಿದ್ದ INDIA ಮಿತ್ರಕೂಟದ ಸಭೆಯನ್ನು ಮುಂದೂಡಲಾಗಿದೆ.

ಪಂಚರಾಜ್ಯಗಳ ಚುನಾವಣೆ ಹಿನ್ನಲೆ INDIA ಒಕ್ಕೂಟದ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ಲೋಕಸಭೆ ಚುನಾವಣೆ (Lok Sabha Election) ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದರು‌. ಹೀಗಾಗಿ ನಾಳೆ ಅಂದರೆ ಬುಧವಾರ ದೆಹಲಿಯಲ್ಲಿ INDIA ಮೈತ್ರಿಕೂಟದ ಸಭೆ ಕರೆಯಲಾಗಿತ್ತು.

ಆದರೆ ಮಿಚಾಂಗ್‌ ಚಂಡಮಾರುತದಿಂದ (Cyclone Michaung) ತಮಿಳುನಾಡಿನಲ್ಲಿ ಭಾರಿ ಮಳೆ ಮತ್ತು ಮಳೆ ಸಂಬಂಧಿತ ಅವಘಡಗಳು ಸಂಭವಿಸಿರುವುದರಿಂದ ಮತ್ತು ರಾಜಧಾನಿ ಚೆನ್ನೈ ವಿಮಾನ ನಿಲ್ದಾಣವನ್ನು ಮುಚ್ಚಿದ್ದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರು ದೆಹಲಿಗೆ ಭೇಟಿ ನೀಡಲು ಮತ್ತು ಸಭೆಗೆ ಬರಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.  ಇತ್ತ ಬಿಹಾರದ ಜೆಡಿಯು ಅಧ್ಯಕ್ಷ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಅಸ್ವಸ್ಥರಾಗಿದ್ದು ಅವರೂ ಕೂಡ ಸಭೆಗೆ ಗೈರಾಗಲಿದ್ದಾರೆ ಎಂದು ಹೇಳಲಾಗಿತ್ತು. ಅಂತೆಯೇ ಪಶ್ಚಿಮ‌ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಸಭೆಗೆ ಗೈರಾಗುವ ಬಗ್ಗೆ‌‌ ಮೊದಲೇ ಮಾಹಿತಿ‌ ನೀಡಿದ್ದರು.

ಇದಲ್ಲದೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೂಡಾ ಸಭೆಯಲ್ಲಿ ಭಾಗಿಯಾಗದಿರುವ ಕುರಿತು ಖಚಿತ ಪಡಿಸಿದ್ದರು. ಆಮ್ ಆದ್ಮಿ ಪಕ್ಷವು ಸಭೆಯಲ್ಲಿ ಭಾಗಿಯಾಗುವ ಬಗ್ಗೆ ಯಾವುದೇ ದೃಢೀಕರಣ ನೀಡಿರಲಿಲ್ಲ. ಹೀಗಾಗಿ ಅಂತಿಮವಾಗಿ ಕಾಂಗ್ರೆಸ್ ಪಕ್ಷ ನಾಳೆ ನಡೆಯಬೇಕಿದ್ದ INDIA ಮೈತ್ರಿಕೂಟದ ಸಭೆಯನ್ನು ಮುಂದೂಡಿದೆ.

ಒಕ್ಕೂಟದ ಪ್ರಮುಖ ನಾಯಕರ ಅಲಭ್ಯತೆ ಹಿನ್ನಲೆ ಸಭೆಯನ್ನು ಮುಂದೂಡಲು ನಿರ್ಧರಿಸಿದ್ದು ಮುಂದಿನ ಎರಡು ವಾರಗಳಲ್ಲಿ ಮತ್ತೆ ಸಭೆಗೆ ದಿನಾಂಕ‌ ನಿಗದಿ ಮಾಡಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ. ಸಭೆ ರದ್ದಾದ ಹಿನ್ನಲೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ತಮ್ಮ ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಿದ್ದಾರೆ ಎಂದು ಶಿವಸೇನೆ ಪಕ್ಷದ ಮೂಲಗಳು ತಿಳಿಸಿವೆ.

ಈ ಹಿಂದೆ ಅಂದರೆ INDIA ಒಕ್ಕೂಟದ ಕೊನೆಯ ಸಭೆಯನ್ನು ಮುಂಬೈನಲ್ಲಿ ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಆಯೋಜಿಸಿದ್ದರು. ಈ ಸಭೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಐದು ರಾಜ್ಯಗಳ ಮುಖ್ಯಮಂತ್ರಿಗಳು ಹಾಜರಿದ್ದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT