INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್ 
ದೇಶ

ಪ್ರಮುಖ ನಾಯಕರ ಗೈರು ಸಾಧ್ಯತೆ: INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್

ಪ್ರಮುಖ ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆಯಲ್ಲಿ ನಾಳೆ ಅಂದರೆ ಬುಧವಾರ ನಡೆಯಬೇಕಿದ್ದ INDIA ಮಿತ್ರಕೂಟದ ಸಭೆಯನ್ನು ಮುಂದೂಡಲಾಗಿದೆ.

ನವದೆಹಲಿ: ಪ್ರಮುಖ ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆಯಲ್ಲಿ ನಾಳೆ ಅಂದರೆ ಬುಧವಾರ ನಡೆಯಬೇಕಿದ್ದ INDIA ಮಿತ್ರಕೂಟದ ಸಭೆಯನ್ನು ಮುಂದೂಡಲಾಗಿದೆ.

ಪಂಚರಾಜ್ಯಗಳ ಚುನಾವಣೆ ಹಿನ್ನಲೆ INDIA ಒಕ್ಕೂಟದ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ಲೋಕಸಭೆ ಚುನಾವಣೆ (Lok Sabha Election) ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದರು‌. ಹೀಗಾಗಿ ನಾಳೆ ಅಂದರೆ ಬುಧವಾರ ದೆಹಲಿಯಲ್ಲಿ INDIA ಮೈತ್ರಿಕೂಟದ ಸಭೆ ಕರೆಯಲಾಗಿತ್ತು.

ಆದರೆ ಮಿಚಾಂಗ್‌ ಚಂಡಮಾರುತದಿಂದ (Cyclone Michaung) ತಮಿಳುನಾಡಿನಲ್ಲಿ ಭಾರಿ ಮಳೆ ಮತ್ತು ಮಳೆ ಸಂಬಂಧಿತ ಅವಘಡಗಳು ಸಂಭವಿಸಿರುವುದರಿಂದ ಮತ್ತು ರಾಜಧಾನಿ ಚೆನ್ನೈ ವಿಮಾನ ನಿಲ್ದಾಣವನ್ನು ಮುಚ್ಚಿದ್ದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರು ದೆಹಲಿಗೆ ಭೇಟಿ ನೀಡಲು ಮತ್ತು ಸಭೆಗೆ ಬರಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.  ಇತ್ತ ಬಿಹಾರದ ಜೆಡಿಯು ಅಧ್ಯಕ್ಷ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಅಸ್ವಸ್ಥರಾಗಿದ್ದು ಅವರೂ ಕೂಡ ಸಭೆಗೆ ಗೈರಾಗಲಿದ್ದಾರೆ ಎಂದು ಹೇಳಲಾಗಿತ್ತು. ಅಂತೆಯೇ ಪಶ್ಚಿಮ‌ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಸಭೆಗೆ ಗೈರಾಗುವ ಬಗ್ಗೆ‌‌ ಮೊದಲೇ ಮಾಹಿತಿ‌ ನೀಡಿದ್ದರು.

ಇದಲ್ಲದೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೂಡಾ ಸಭೆಯಲ್ಲಿ ಭಾಗಿಯಾಗದಿರುವ ಕುರಿತು ಖಚಿತ ಪಡಿಸಿದ್ದರು. ಆಮ್ ಆದ್ಮಿ ಪಕ್ಷವು ಸಭೆಯಲ್ಲಿ ಭಾಗಿಯಾಗುವ ಬಗ್ಗೆ ಯಾವುದೇ ದೃಢೀಕರಣ ನೀಡಿರಲಿಲ್ಲ. ಹೀಗಾಗಿ ಅಂತಿಮವಾಗಿ ಕಾಂಗ್ರೆಸ್ ಪಕ್ಷ ನಾಳೆ ನಡೆಯಬೇಕಿದ್ದ INDIA ಮೈತ್ರಿಕೂಟದ ಸಭೆಯನ್ನು ಮುಂದೂಡಿದೆ.

ಒಕ್ಕೂಟದ ಪ್ರಮುಖ ನಾಯಕರ ಅಲಭ್ಯತೆ ಹಿನ್ನಲೆ ಸಭೆಯನ್ನು ಮುಂದೂಡಲು ನಿರ್ಧರಿಸಿದ್ದು ಮುಂದಿನ ಎರಡು ವಾರಗಳಲ್ಲಿ ಮತ್ತೆ ಸಭೆಗೆ ದಿನಾಂಕ‌ ನಿಗದಿ ಮಾಡಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ. ಸಭೆ ರದ್ದಾದ ಹಿನ್ನಲೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ತಮ್ಮ ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಿದ್ದಾರೆ ಎಂದು ಶಿವಸೇನೆ ಪಕ್ಷದ ಮೂಲಗಳು ತಿಳಿಸಿವೆ.

ಈ ಹಿಂದೆ ಅಂದರೆ INDIA ಒಕ್ಕೂಟದ ಕೊನೆಯ ಸಭೆಯನ್ನು ಮುಂಬೈನಲ್ಲಿ ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಆಯೋಜಿಸಿದ್ದರು. ಈ ಸಭೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಐದು ರಾಜ್ಯಗಳ ಮುಖ್ಯಮಂತ್ರಿಗಳು ಹಾಜರಿದ್ದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT