ಚೆನ್ನೈ ಜಲಾವೃತ 
ದೇಶ

ಮಿಚಾಂಗ್ ಚಂಡಮಾರುತ ಅಬ್ಬರ: ಚೆನ್ನೈ ಜಲಾವೃತ; ತೆಲಂಗಾಣ, ಆಂಧ್ರ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ದಕ್ಷಿಣ ಭಾರತದಲ್ಲಿ ಮಳೆ, ತೀವ್ರ ಪ್ರವಾಹ ಸೃಷ್ಟಿಸಿರುವ ಮಿಚಾಂಗ್ ಚಂಡಮಾರುತ ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. 

ತಮಿಳು ನಾಡು/ತೆಲಂಗಾಣ/ಆಂಧ್ರ ಪ್ರದೇಶ: ದಕ್ಷಿಣ ಭಾರತದಲ್ಲಿ ಮಳೆ, ತೀವ್ರ ಪ್ರವಾಹ ಸೃಷ್ಟಿಸಿರುವ ಮಿಚಾಂಗ್ ಚಂಡಮಾರುತ ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. 

ಆಂಧ್ರಪ್ರದೇಶದ ಬಾಪಟ್ಲಾ ಸಮೀಪ ನೆಲ್ಲೂರು ಮತ್ತು ಮಚಿಲಿಪಟ್ಟಣಂ ನಡುವೆ ತೀವ್ರ ಚಂಡಮಾರುತದಿಂದ  ಭೂಕುಸಿತವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ ಇಂದು ಮತ್ತು 6 ರಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಮಿಚಾಂಗ್' ಚಂಡಮಾರುತವು ಇಂದು ಆಂಧ್ರಪ್ರದೇಶದ ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ ಭೂಕುಸಿತವನ್ನು ಉಂಟುಮಾಡುವ ಸಾಧ್ಯತೆಯಿದೆ. ಜಿಲ್ಲೆಯ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ. ಭೂಕುಸಿತದ ಸಮಯದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಲ್ಲಿ, ಆಂಧ್ರಪ್ರದೇಶದ ಮುಖ್ಯಮಂತ್ರಿಗಳು ಅಗತ್ಯ ಸಿದ್ಧತೆಗಳಿಗಾಗಿ ಎಂಟು ಜಿಲ್ಲೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ಅಲ್ಪಾವಧಿಯ ವಾಯುಭಾರ ಕುಸಿತದಿಂದ ಚೆನ್ನೈನಲ್ಲಿ ನಿರಂತರ ಮಳೆಯಾಗುತ್ತಿದ್ದು ಚೆನ್ನೈ ಮತ್ತು ಸುತ್ತಮುತ್ತಲಿನ ಹಲವಾರು ಪ್ರದೇಶಗಳು ಜಲಾವೃತವಾಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ನಗರದ ಮಧುರವಾಯಲ್, ಪೋರೂರ್, ಸಾಲಿಗರಾಮಮ್ ಮತ್ತು ವಲಸರವಕ್ಕಂ ಸೇರಿದಂತೆ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಜೋರಾದ ಗಾಳಿಗೆ ವಿವಿಧೆಡೆ ಮರಗಳು ಧರೆಗುರುಳಿವೆ.

ಚೆನ್ನೈಯಲ್ಲಿ ಧಾರಾಕಾರ ಮಳೆ: ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಲ್ಲಿ ಮಿಚಾಂಗ್ ಚಂಡಮಾರುತ ಹಾನಿಯನ್ನುಂಟುಮಾಡಿದೆ. ಭಾನುವಾರ ಬೆಳಗ್ಗೆಯಿಂದ 400ರಿಂದ 500 ಮಿ.ಮೀ ಮಳೆ ಸುರಿದಿದ್ದು, ಕರಾವಳಿಯ ಮಹಾನಗರದಲ್ಲಿ ಮನೆಗಳಿಗೆ ನೀರು ನುಗ್ಗಿ ಕಾರು, ಬೈಕ್​ಗಳು ನಾಶವಾಗಿವೆ. ಅಣ್ಣಾ ಸಲೈ ಸೇರಿದಂತೆ ಹಲವಾರು ರಸ್ತೆಗಳು ಜಲಮಾರ್ಗಗಳಾಗಿ ಮಾರ್ಪಟ್ಟಿವೆ. ಹೆಚ್ಚಿನ ಸಂಖ್ಯೆಯ ನಿಲುಗಡೆ ಮಾಡಿದ ಕಾರುಗಳು ಪಲ್ಲಿಕರಣೈನ ಗೇಟ್ ಕಾಲೋನಿಯಿಂದ ಕೊಚ್ಚಿಹೋಗಿವೆ.

ನಿನ್ನೆ ಮುಂಜಾನೆಯಿಂದ  ಸಂಜೆ 6ರವರೆಗೆ ಎಡೆಬಿಡದೆ ಸುರಿದ ಮಳೆಯಿಂದಾಗಿ ಚೆನ್ನೈನ ಬಹುತೇಕ ಎಲ್ಲ ರಸ್ತೆಗಳು, ವಸತಿ ಪ್ರದೇಶಗಳು, ರೈಲು ನಿಲ್ದಾಣಗಳು, ವಿಮಾನ ನಿಲ್ದಾಣಗಳು, ಬಸ್ ನಿಲ್ದಾಣಗಳು ನದಿಗಳಂತೆ ಮಾರ್ಪಟ್ಟಿವೆ. ನಗರದ ಎಲ್ಲಾ 17 ಸುರಂಗಮಾರ್ಗಗಳು ನೀರಿನಲ್ಲಿ ಮುಳುಗಿವೆ, ಇಲ್ಲಿಯವರೆಗೆ 5 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇಂದು ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಭೂಕುಸಿತವಾಗುವ ಸಾಧ್ಯತೆಯಿರುವ ತೀವ್ರ ಚಂಡಮಾರುತದ ಮಿಚಾಂಗ್ ಚಂಡಮಾರುತದ ಹಿನ್ನೆಲೆಯಲ್ಲಿ ಭಾರೀ ಮಳೆಯಿಂದಾಗಿ ಚೆನ್ನೈ ನಗರವು ಜಲಾವೃತವಾಗಿದೆ.

ಹೈದರಾಬಾದ್ ನ ಸ್ಥಿತಿಗತಿ: ಭಾರತೀಯ ಹವಾಮಾನ ಇಲಾಖೆಯು ಮುಲುಗು, ಭದ್ರಾದ್ರಿ ಕೊತಗುಡೆಂ ಮತ್ತು ಖಮ್ಮಂ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಮಿಚಾಂಗ್ ಚಂಡಮಾರುತದಿಂದಾಗಿ  ಭಾರೀ ಮಳೆಯಾಗಲಿದೆ.

ತೀವ್ರ ಚಂಡಮಾರುತ ಮಿಚಾಂಗ್ ಇಂದು ಮುಂಜಾನೆ ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ತೀವ್ರಗೊಳಿಸುವ ಮತ್ತು ದಾಟುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಚಂಡಮಾರುತವು ಗರಿಷ್ಠ 90-100 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ, ಗಾಳಿಯು ಗಂಟೆಗೆ ಸುಮಾರು 110 ಕಿಮೀ ತಲುಪುತ್ತದೆ.

ರಾಜ್ಯದ ಹಲವು ಭಾಗಗಳಿಗೆ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಎಚ್ಚರಿಕೆಗಳನ್ನು ನೀಡಲಾಗಿದೆ. ಸೂರ್ಯಪೇಟ್, ಮಹಬೂಬಾಬಾದ್, ವಾರಂಗಲ್ ಮತ್ತು ಹನಮಕೊಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರೀಂನಗರ, ಪೆದ್ದಪಲ್ಲಿ, ನಲ್ಗೊಂಡ, ಜನಾಂವ್ ಮತ್ತು ಸಿದ್ದಿಪೇಟೆಯ ಕೆಲವು ಪ್ರತ್ಯೇಕ ಸ್ಥಳಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಹೈದರಾಬಾದ್, ರಂಗಾರೆಡ್ಡಿ, ಮೇಡ್ಚಲ್, ಮಲ್ಕಾಜ್‌ಗಿರಿ ಮತ್ತು ನಾಗರ್‌ಕರ್ನೂಲ್‌ನ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಮತ್ತು ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಪ್ರದೇಶಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಮುಂದಿನ 48 ಗಂಟೆಗಳ ಕಾಲ ಹೈದರಾಬಾದ್ ನಗರ ಮತ್ತು ಅದರ ನೆರೆಹೊರೆಯಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಮಂಜು/ಮಬ್ಬಿನ ವಾತಾವರಣವಿರುವ ಸಾಧ್ಯತೆಯಿದೆ. ಮಂಚೇರಿಯಾ, ಪೆದ್ದಪಲ್ಲಿ, ಮುಳುಗು, ಭದ್ರಾದ್ರಿ ಕೊತಗುಡೆಂ ಮತ್ತು ಜಯಶಂಕರ್ ಭೂಪಾಲಪಲ್ಲಿಯಲ್ಲಿ ಬುಧವಾರವೂ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಪ್ರದೇಶಗಳಲ್ಲಿ ಬೆಳಕು ಮತ್ತು ಜೋರಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

SCROLL FOR NEXT