INDIA ಮೈತ್ರಿಕೂಟದ ನಾಯಕರು 
ದೇಶ

ಡಿ.17 ಕ್ಕೆ INDIA ಮೈತ್ರಿಕೂಟದ ಸಭೆ ನಿಗದಿ, 2024 ರ ಚುನಾವಣೆಗೆ ಕಾರ್ಯತಂತ್ರದ ಚರ್ಚೆ: ಆರ್ ಜೆಡಿ ನಾಯಕ ಲಾಲು

ವಿಪಕ್ಷಗಳ ಮೈತ್ರಿಕೂಟ INDIA ಸಭೆ ಡಿ.17 ರಂದು ನಡೆಯಲಿರುವುದಾಗಿ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸ್ಪಷ್ಟಪಡಿಸಿದ್ದಾರೆ. 

ಪಾಟ್ನ: ವಿಪಕ್ಷಗಳ ಮೈತ್ರಿಕೂಟ INDIA ಸಭೆ ಡಿ.17 ರಂದು ನಡೆಯಲಿರುವುದಾಗಿ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸ್ಪಷ್ಟಪಡಿಸಿದ್ದಾರೆ. 

2024 ರ ಲೋಕಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚಿಸಲು ಡಿ.06 ರಂದು ಸಭೆ ನಡೆಯಬೇಕಿತ್ತು. 

ಆದರೆ ಡಿ.06 ರಂದು ಮಮತಾ ಬ್ಯಾನರ್ಜಿ, ನಿತೀಶ್ ಸೇರಿದಂತೆ ಹಲವು ಪ್ರಮುಖ ನಾಯಕರ ಅಲಭ್ಯತೆಯ ಕಾರಣದಿಂದ ಸಭೆಯನ್ನು ಮುಂದೂಡಲಾಗಿತ್ತು.  ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಲಾಲು ಪ್ರಸಾದ್ ಯಾದವ್, ಸಭೆಯನ್ನು ಡಿ.17 ಕ್ಕೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಮುಖ ನಾಯಕರ ಗೈರು ಸಾಧ್ಯತೆ: INDIA ಮೈತ್ರಿಕೂಟ ಸಭೆ ಮುಂದೂಡಿದ ಕಾಂಗ್ರೆಸ್
 
ಇನ್ನು ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆಯೂ ಲಾಲು ಪ್ರಸಾದ್ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ದುರ್ಬಲವಾಗಿಲ್ಲ. ಆದರೆ ರಾಜ್ಯಗಳಲ್ಲಿನ ಸ್ಥಳೀಯ ನಾಯಕತ್ವದ ದುರ್ಬಲತೆಯಿಂದಾಗಿ ಚುನಾವಣೆಯಲ್ಲಿ 3 ರಾಜ್ಯಗಳಲ್ಲಿ ಸೋತಿದೆ. ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಸ್ಥಳೀಯ ನಾಯಕತ್ವದೆಡೆಗೆ ಕಾಂಗ್ರೆಸ್ ಹೆಚ್ಚಿನ ಕೆಲಸ ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Tata sons ಅಧ್ಯಕ್ಷರಾಗಿ ಚಂದ್ರಶೇಖರನ್ ಮರು ಆಯ್ಕೆ, IPO ಗೆ ಮತದಾನ ಕಾನೂನುಬಾಹಿರ- ಟಾಟಾ ಟ್ರಸ್ಟ್ಸ್ ತಗಾದೆ

ರಾಮ ಮಂದಿರ ತೀರ್ಪು ಬಂದಾಗ ಶಾರುಖ್, ಸಲ್ಮಾನ್, ಆಮಿರ್ ಖಾನ್ ಬಳಿ ಕ್ಷಮೆ ಕೇಳಿದ್ದೆ; ಹಿಂದೂವಾಗಿ ನನಗೆ ಅಸಹ್ಯವಾಗಿತ್ತು: ನಟಿ ಸ್ವರಾ ಭಾಸ್ಕರ್

India vs Afghanistan: ರೋಹಿತ್ ಶರ್ಮಾ ದಾಖಲೆ ಮುರಿದ ಅಭಿಷೇಕ್ ಶರ್ಮಾ; T20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ!

ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೆ ಮಾತ್ರ ಗೊತ್ತು: ಮಾಜಿ CM ಸಿದ್ದರಾಮಯ್ಯ ಬೇಸರ

PM Modi Birthday: 'ಆತ್ಮೀಯ ಗೆಳೆಯ' ಮೋದಿಗೆ ಜಾರ್ಜಿಯಾ ಮೆಲೋನಿ ವಿಶೇಷ ವಿಶ್; ಇಟಲಿ ಪ್ರಧಾನಿಯಿಂದ ಹೃದಯಸ್ಪರ್ಶಿ ಸಂದೇಶ!