ಸಾಂದರ್ಭಿಕ ಚಿತ್ರ 
ದೇಶ

ಆಂಧ್ರ ಪ್ರದೇಶದ ಬಾಪಟ್ಲಾಗೆ ಅಪ್ಪಳಿಸಿದ ಮಿಚಾಂಗ್ ಚಂಡಮಾರುತ

ದಕ್ಷಿಣ ಆಂಧ್ರಪ್ರದೇಶ ಕರಾವಳಿಯ ಬಾಪಟ್ಲಾಗೆ ಮಿಚಾಂಗ್ ಚಂಡಮಾರುತ ಅಪ್ಪಳಿಸಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಅಮರಾವತಿ: ದಕ್ಷಿಣ ಆಂಧ್ರಪ್ರದೇಶ ಕರಾವಳಿಯ ಬಾಪಟ್ಲಾಗೆ ಮಿಚಾಂಗ್ ಚಂಡಮಾರುತ ಅಪ್ಪಳಿಸಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮಿಚಾಂಗ್ ಚಂಡಮಾರುತ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯ ಉದ್ದಕ್ಕೂ ಮತ್ತು ಅದರ ಆಚೆಗೂ ತೀವ್ರ ಸ್ವರೂಪದ ಬಿರುಗಾಳಿ ಅಪ್ಪಳಿಸಲಿದೆ ಎನ್ನಲಾಗಿದೆ. ಮುಂದಿನ ಎರಡು ಗಂಟೆಗಳಲ್ಲಿ ಮಿಚಾಂಗ್ ದುರ್ಬಲವಾಗುವ ನಿರೀಕ್ಷೆಯಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

"ಚಂಡಮಾರುತ ಮಿಚಾಂಗ್ ಪ್ರಸ್ತುತ ಬಾಪಟ್ಲಾ ಸಮೀಪ ಇದ್ದು, ಬಾಪಟ್ಲಾ ಮತ್ತು ಕೃಷ್ಣ ಜಿಲ್ಲೆಗಳ ಮೇಲೆ ತೀವ್ರ ಶಕ್ತಿಶಾಲಿ ಬಿರುಗಾಳಿ ಉದ್ಭವಿಸಲಿದೆ. ಇದು ಮಧ್ಯಾಹ್ನ 2 ಗಂಟೆಯ ವೇಳೆಗೆ ಬಾಪಟ್ಲಾ ದಾಟುವ ಸಾಧ್ಯತೆ ಇದೆ" ಎಂದು ಅಮರಾವತಿ ಹವಾಮಾನ ಕೇಂದ್ರದ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಮಿಚಾಂಗ್ ಚಂಡಮಾರುತ ಗಂಟೆಗೆ 90 ರಿಂದ 100 ಕಿಮೀ ವೇಗದಲ್ಲಿ ಚಲಿಸುತ್ತಿದ್ದು, ಕ್ರಮೇಣ ಅದು ಗಂಟೆಗೆ 110 ಕಿಮೀ ವೇಗ ಹೆಚ್ಚಿಸಿಕೊಳ್ಳಲಿದೆ ಎಂದು ಅಮರಾವತಿ ಹವಾಮಾನ ಕೇಂದ್ರ ತಿಳಿಸಿದೆ.

ಏತನ್ಮಧ್ಯೆ, ಕೋನಸೀಮಾ, ಕಾಕಿನಾಡ, ಕೃಷ್ಣ, ಬಾಪಟ್ಲಾ ಮತ್ತು ಪ್ರಕಾಶಂ ಏಳು ಜಿಲ್ಲೆಗಳಿಂದ 9,454 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು APSDMA ಪಿಟಿಐಗೆ ತಿಳಿಸಿದೆ.

ತಿರುಪತಿ, ನೆಲ್ಲೂರ್, ಪ್ರಕಾಸಂ, ಬಾಪಟ್ಲಾ, ಕೃಷ್ಣ, ಪಶ್ಚಿಮ ಗೋದಾವರಿ, ಕೋನಸೀಮಾ ಮತ್ತು ಕಾಕಿನಾಡ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆಂಧ್ರ ಸರ್ಕಾರ ಸೂಚನೆ ನೀಡಿದೆ. ಪುದುಚೆರಿಯಲ್ಲಿ ಸಂಜೆ 6 ಗಂಟೆಯವರೆಗೂ ಕರಾವಳಿ ತೀರಗಳಲ್ಲಿ ಜನರ ಓಡಾಟದ ಮೇಲೆ ನಿರ್ಬಂಧ ವಿಧಿಸಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ; ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌: ಖಾದರ್ ಮಹತ್ವದ ಘೋಷಣೆ

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!