ಅಮಿತ್ ಶಾ 
ದೇಶ

ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮಸೂದೆ ಅಂಗೀಕಾರ, ಪಿಒಕೆ ನಮ್ಮದು ಎಂದ ಅಮಿತ್ ಶಾ

ಜಮ್ಮು ಮತ್ತು ಕಾಶ್ಮೀರ ಮೀಸಲಾತಿ ತಿದ್ದುಪಡಿ ಮಸೂದೆ -2023 ಹಾಗೂ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ 2023 ಅನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

ದೆಹಲಿ: ಜಮ್ಮು ಮತ್ತು ಕಾಶ್ಮೀರ ಮೀಸಲಾತಿ ತಿದ್ದುಪಡಿ ಮಸೂದೆ -2023 ಹಾಗೂ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ 2023 ಅನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

ಇಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಈ ಎರಡು ಮಸೂದೆಗಳನ್ನು ಮಂಡಿಸಿದರು. 

ಮಸೂದೆ ಮಂಡಿಸಿ ಮಾತನಾಡಿದ ಅಮಿತ್ ಶಾ, ಮೋದಿ ಸರ್ಕಾರದ ಗುರಿ ಪಿಒಕೆ ಅಂತ ಘೋಷಿಸಿದರು. ಯಾರಿಗೂ ಕಾಶ್ಮೀರಿಗಳ ಬಗ್ಗೆ ಕಾಳಜಿ ಇರಲಿಲ್ಲ. ಆದರೆ ಈಗ ಅವರಿಗೆ ನ್ಯಾಯ ಕೊಡಿಸುವ ಸಮಯ ಬಂದಿದೆ. ಈ ಕೆಲಸವನ್ನು ನರೇಂದ್ರ ಮೋದಿ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಮೋದಿ ಸರ್ಕಾರ ಕೇವಲ ಉಗ್ರರನ್ನು ನಿರ್ಮೂಲನೆ ಮಾಡಿಲ್ಲ. ಉಗ್ರರಿಗೆ ಹಣ ನೀಡುತ್ತಿದ್ದ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು ಕ್ರಮ ತೆಗೆದುಕೊಂಡಿದೆ ಎಂದು ಅಮಿತ್ ಶಾ ತಿಳಿಸಿದರು.

ಕಾಶ್ಮೀರದ ಈ ಎರಡು ಮಸೂದೆಗಳಲ್ಲಿ ಒಂದು ಮಸೂದೆ ಮಹಿಳೆ ಸೇರಿದಂತೆ ಇಬ್ಬರು ಕಾಶ್ಮೀರಿ ವಲಸಿಗ ಸಮುದಾಯದ ಸದಸ್ಯರನ್ನು ವಿಧಾನಸಭೆಗೆ ನಾಮನಿರ್ದೇಶನ ಮಾಡಲು ಅವಕಾಶ ಕಲ್ಪಿಸುತ್ತದೆ ಎಂದು ಕೇಂದ್ರ ಗೃಹ ಸಚಿವರು ಲೋಕಸಭೆಗೆ ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಈ ಎರಡು ಮಸೂದೆಗಳು ಕಳೆದ 70 ವರ್ಷಗಳಿಂದ ತಮ್ಮ ಹಕ್ಕುಗಳಿಂದ ವಂಚಿತರಾದವರಿಗೆ ನ್ಯಾಯವನ್ನು ನೀಡಲಿವೆ ಎಂದು ಅಮಿತ್ ಶಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT