ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ 
ದೇಶ

ಪ್ರಶ್ನೆಗಾಗಿ ಲಂಚ: ಮೊಯಿತ್ರಾಗೆ ಸಂಬಂಧಿಸಿದ ನೈತಿಕ ಸಮಿತಿ ವರದಿ ನಾಳೆ ಲೋಕಸಭೆಯಲ್ಲಿ ಮಂಡನೆ ಸಾಧ್ಯತೆ

ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆಗೆ...

ನವದೆಹಲಿ: ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆಗೆ ಸಂಬಂಧಿಸಿದ ನೈತಿಕ ಸಮಿತಿಯ ವರದಿಯನ್ನು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಸಂಸದೀಯ ಮೂಲಗಳು ಗುರುವಾರ ತಿಳಿಸಿವೆ.

ನೈತಿಕ ಸಮಿತಿ ವರದಿಯನ್ನು ಈ ಹಿಂದೆ ಡಿಸೆಂಬರ್ 4 ರ ಲೋಕಸಭೆಯ ಕಾರ್ಯಸೂಚಿಯಲ್ಲಿ ಪಟ್ಟಿ ಮಾಡಲಾಗಿತ್ತು. ಆದರೆ ಅಂದು ಅದನ್ನು ಮಂಡಿಸಲಾಗಿಲ್ಲ.

ಮೊಯಿತ್ರಾ ಉಚ್ಚಾಟನೆಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳುವ ಮುನ್ನ ಶಿಫಾರಸ್ಸುಗಳ ಕುರಿತು ಚರ್ಚೆಯಾಗಬೇಕು ಎಂದು ವಿವಿಧ ವಿರೋಧ ಪಕ್ಷದ ಸದಸ್ಯರು ಒತ್ತಾಯಿಸಿದ್ದಾರೆ.

ವರದಿ ಮಂಡನೆಯಾದರೆ, ಎರಡೂವರೆ ನಿಮಿಷದಲ್ಲಿ ಕರಡು ಅಂಗೀಕರಿಸಿದ ನೈತಿಕ ಸಮತಿಯ ವರದಿಯ ಬಗ್ಗೆ ಪೂರ್ಣ ಪ್ರಮಾಣದ ಚರ್ಚೆಗೆ ಒತ್ತಾಯಿಸುತ್ತೇವೆ ಎಂದು ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿನೋದ್ ಕುಮಾರ್ ಸೋಂಕರ್ ನೇತೃತ್ವದ ಸಮಿತಿಯು ನವೆಂಬರ್ 9 ರಂದು ನಡೆದ ಸಭೆಯಲ್ಲಿ "ಪ್ರಶ್ನೆಗಾಗಿ ಲಂಚ ಪಡೆದ" ಆರೋಪದ ಮೇಲೆ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸುವಂತೆ ಶಿಫಾರಸು ಮಾಡುವ ವರದಿಯನ್ನು ಅಂಗೀಕರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!