ವಿದೇಶಾಂಗ ಸಚಿವ ಎಸ್ ಜೈಶಂಕರ್ 
ದೇಶ

ಪನ್ನುನ್ ಪ್ರಕರಣ: ಅಮೇರಿಕಾದಿಂದ ಮಾಹಿತಿ ಪಡೆದ ಬಳಿಕ ಭಾರತ ತನಿಖಾ ಸಮಿತಿ ರಚಿಸಿದೆ- ಜೈಶಂಕರ್ 

ಸಿಖ್ ಪ್ರತ್ಯೇಕತವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಪಿತೂರಿಯಲ್ಲಿ ಭಾರತದ ಕೈವಾಡವಿದೆ ಎಂಬ ಅಮೇರಿಕಾ ಆರೋಪದ ಬೆನ್ನಲ್ಲೇ ವಿದೇಶಾಂಗ ಸಚಿವ ಜೈ ಶಂಕರ್ ಈ ವಿಚಾರವಾಗಿ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ನವದೆಹಲಿ: ಸಿಖ್ ಪ್ರತ್ಯೇಕತವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಪಿತೂರಿಯಲ್ಲಿ ಭಾರತದ ಕೈವಾಡವಿದೆ ಎಂಬ ಅಮೇರಿಕಾ ಆರೋಪದ ಬೆನ್ನಲ್ಲೇ ವಿದೇಶಾಂಗ ಸಚಿವ ಜೈ ಶಂಕರ್ ಈ ವಿಚಾರವಾಗಿ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ವಿಷಯ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ್ದಾಗಿದೆ ಆದ್ದರಿಂದ ಅಮೇರಿಕಾದಿಂದ ನಮಗೆ ಬಂದಿರುವ ಮಾಹಿತಿ ಬಗ್ಗೆ ತನಿಖಾ ಸಮಿತಿ ಗಮನ ಹರಿಸಲಿದೆ ಎಂದು ಜೈಶಂಕರ್ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಈ ವಿಷಯವಾಗಿ ಮಾತನಾಡಿದ ಸಚಿವರು, ಒಟ್ಟಾವಾ ಭಾರತಕ್ಕೆ ಯಾವುದೇ ನಿರ್ದಿಷ್ಟ ಪುರಾವೆಗಳು ಅಥವಾ ಮಾಹಿತಿಯನ್ನು ಒದಗಿಸದ ಕಾರಣ ಖಾಲಿಸ್ತಾನಿ ಉಗ್ರಗಾಮಿಯ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಒಳಗೊಳ್ಳುವಿಕೆಯ ಕೆನಡಾದ ಆರೋಪಗಳಿಗೆ ಇದೇ ಮಾದರಿಯಲ್ಲಿ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಹೇಳಿದ್ದಾರೆ.

"ಯುಎಸ್‌ಗೆ ಸಂಬಂಧಿಸಿದಂತೆ, ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ ನಮ್ಮ ಭದ್ರತಾ ಸಹಕಾರದ ಭಾಗವಾಗಿ ಕೆಲವು ಮಾಹಿತಿಗಳನ್ನು ನಮಗೆ ನೀಡಲಾಗಿದೆ. ಆ ಮಾಹಿತಿಗಳು ಸಂಘಟಿತ ಅಪರಾಧ, ಕಳ್ಳಸಾಗಣೆ ಮತ್ತು ಇತರ ವಿಷಯಗಳ ಸಂಬಂಧಿತವಾಗಿದ್ದರಿಂದ ನಮಗೆ ಕಳವಳವನ್ನುಂಟುಮಾಡಿದವು ಎಂದು ಜೈಶಂಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲಡಾಖ್ ಗಡಿ ಸಂಘರ್ಷ: ಮಾಜಿ ಸೇನಾಧಿಕಾರಿ ನರವಾಣೆ ಅಪ್ರಕಟಿತ ಪುಸ್ತಕ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಸಂಸತ್ ನಲ್ಲಿ ಕೋಲಾಹಲ, ಕಲಾಪ ಮುಂದೂಡಿಕೆ

ಭಾರತದ ಕನಸುಗಳಿಗೆ ಇಂಧನ: ಬಾಹ್ಯಾಕಾಶ ಜಿಗಿತಕ್ಕೆ 13,700 ಕೋಟಿ (ಜಾಗತಿಕ ಜಗಲಿ)

ಭಾರತದ ಮೇಲೆ ಬೆರಳು ತೋರಿಸೋದು ನಿಮ್ಮ ಹಳೆಯ ಚಾಳಿ, ಆರೋಪ ಮಾಡೋದು ಬಿಟ್ಟು ಆಂತರಿಕ ಭದ್ರತಾ ವೈಫಲ್ಯಗಳತ್ತ ಗಮನಹರಿಸಿ: ಪಾಕ್'ಗೆ ಭಾರತ ತಿರುಗೇಟು

ದಕ್ಷಿಣ ಪಿನಾಕಿನಿ ಜಲವಿವಾದ ಪ್ರಕರಣ: ನ್ಯಾಯಮಂಡಳಿ ಸ್ಥಾಪಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

'ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ': ರಂಜಾನ್ ವೇಳೆ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ, BJP ಕಿಡಿ!

SCROLL FOR NEXT