ವಿದೇಶಾಂಗ ಸಚಿವ ಎಸ್ ಜೈಶಂಕರ್ 
ದೇಶ

ಪನ್ನುನ್ ಪ್ರಕರಣ: ಅಮೇರಿಕಾದಿಂದ ಮಾಹಿತಿ ಪಡೆದ ಬಳಿಕ ಭಾರತ ತನಿಖಾ ಸಮಿತಿ ರಚಿಸಿದೆ- ಜೈಶಂಕರ್ 

ಸಿಖ್ ಪ್ರತ್ಯೇಕತವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಪಿತೂರಿಯಲ್ಲಿ ಭಾರತದ ಕೈವಾಡವಿದೆ ಎಂಬ ಅಮೇರಿಕಾ ಆರೋಪದ ಬೆನ್ನಲ್ಲೇ ವಿದೇಶಾಂಗ ಸಚಿವ ಜೈ ಶಂಕರ್ ಈ ವಿಚಾರವಾಗಿ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ನವದೆಹಲಿ: ಸಿಖ್ ಪ್ರತ್ಯೇಕತವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಪಿತೂರಿಯಲ್ಲಿ ಭಾರತದ ಕೈವಾಡವಿದೆ ಎಂಬ ಅಮೇರಿಕಾ ಆರೋಪದ ಬೆನ್ನಲ್ಲೇ ವಿದೇಶಾಂಗ ಸಚಿವ ಜೈ ಶಂಕರ್ ಈ ವಿಚಾರವಾಗಿ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ವಿಷಯ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ್ದಾಗಿದೆ ಆದ್ದರಿಂದ ಅಮೇರಿಕಾದಿಂದ ನಮಗೆ ಬಂದಿರುವ ಮಾಹಿತಿ ಬಗ್ಗೆ ತನಿಖಾ ಸಮಿತಿ ಗಮನ ಹರಿಸಲಿದೆ ಎಂದು ಜೈಶಂಕರ್ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಈ ವಿಷಯವಾಗಿ ಮಾತನಾಡಿದ ಸಚಿವರು, ಒಟ್ಟಾವಾ ಭಾರತಕ್ಕೆ ಯಾವುದೇ ನಿರ್ದಿಷ್ಟ ಪುರಾವೆಗಳು ಅಥವಾ ಮಾಹಿತಿಯನ್ನು ಒದಗಿಸದ ಕಾರಣ ಖಾಲಿಸ್ತಾನಿ ಉಗ್ರಗಾಮಿಯ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಒಳಗೊಳ್ಳುವಿಕೆಯ ಕೆನಡಾದ ಆರೋಪಗಳಿಗೆ ಇದೇ ಮಾದರಿಯಲ್ಲಿ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಹೇಳಿದ್ದಾರೆ.

"ಯುಎಸ್‌ಗೆ ಸಂಬಂಧಿಸಿದಂತೆ, ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ ನಮ್ಮ ಭದ್ರತಾ ಸಹಕಾರದ ಭಾಗವಾಗಿ ಕೆಲವು ಮಾಹಿತಿಗಳನ್ನು ನಮಗೆ ನೀಡಲಾಗಿದೆ. ಆ ಮಾಹಿತಿಗಳು ಸಂಘಟಿತ ಅಪರಾಧ, ಕಳ್ಳಸಾಗಣೆ ಮತ್ತು ಇತರ ವಿಷಯಗಳ ಸಂಬಂಧಿತವಾಗಿದ್ದರಿಂದ ನಮಗೆ ಕಳವಳವನ್ನುಂಟುಮಾಡಿದವು ಎಂದು ಜೈಶಂಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ