ಮಹುವಾ ಕುರಿತ ನೈತಿಕ ಸಮಿತಿ ವರದಿ ಕುರಿತು ಕೇಂದ್ರ ಸರ್ಕಾರದ ನಿರ್ಣಯ ಮಂಡನೆ 
ದೇಶ

ಪ್ರಶ್ನೆಗಾಗಿ ಲಂಚ: ಸಂಸದೆ ಮಹುವಾ ಕುರಿತ ನೈತಿಕ ಸಮಿತಿ ವರದಿ ಕುರಿತು ಕೇಂದ್ರ ಸರ್ಕಾರದ ನಿರ್ಣಯ ಮಂಡನೆ

ತೃಣಮೂಲ ಕಾಂಗ್ರೆಸ್‌ ಸಂಸದೆ (TMC MP) ಮಹುವಾ ಮೊಯಿತ್ರಾ (Mahua Moitra) ವಿರುದ್ಧದ 'ಪ್ರಶ್ನೆಗಾಗಿ ಲಂಚ' ಪಡೆದ ಪ್ರಕರಣದ ಕುರಿತು ಸದನ ನೈತಿಕ ಸಮಿತಿಯು ತಯಾರಿಸಿರುವ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಇದೀಗ ಕೇಂದ್ರ ಸರ್ಕಾರ ವರದಿ ಕುರಿತು ಕಲಾಪದಲ್ಲಿ ತನ್ನ ನಿರ್ಣಯ ಮಂಡಿಸಿದೆ.

ನವದೆಹಲಿ: ತೃಣಮೂಲ ಕಾಂಗ್ರೆಸ್‌ ಸಂಸದೆ (TMC MP) ಮಹುವಾ ಮೊಯಿತ್ರಾ (Mahua Moitra) ವಿರುದ್ಧದ 'ಪ್ರಶ್ನೆಗಾಗಿ ಲಂಚ' ಪಡೆದ ಪ್ರಕರಣದ ಕುರಿತು ಸದನ ನೈತಿಕ ಸಮಿತಿಯು ತಯಾರಿಸಿರುವ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದ್ದು, ಇದೀಗ ಕೇಂದ್ರ ಸರ್ಕಾರ ವರದಿ ಕುರಿತು ಕಲಾಪದಲ್ಲಿ ತನ್ನ ನಿರ್ಣಯ ಮಂಡಿಸಿದೆ.

ಸಂಸದೆ ಮೊಯಿತ್ರಾ ಅವರನ್ನು ಉಚ್ಚಾಟಿಸುವಂತೆ ವರದಿ ಶಿಫಾರಸು ಮಾಡಿದ್ದು, ಇದೇ ವರದಿಯನ್ನು ಇದೀಗ ಲೋಕಸಭೆಯಲ್ಲಿ ಮಂಡಿಸಲಾಗಿದೆ. ಅಂತೆಯೇ ಇದೀಗ ಕೇಂದ್ರ ಸರ್ಕಾರ ಕೂಡ ಮಹುವಾ ಕುರಿತು ನೈತಿಕ ಸಮಿತಿ ವರದಿಯನ್ನು ಅಳವಡಿಸಿಕೊಳ್ಳಲು ತನ್ನ ನಿರ್ಣಯ ಮಂಡಿಸಿದೆ. ಮೂಲಗಳ ಪ್ರಕಾರ ನೈತಿಕ ಸಮಿತಿಯ ವರದಿಯನ್ವಯ ಮೊಯಿತ್ರಾ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಉಚ್ಛಾಟನೆ ಮಾಡುವ ಶಿಫಾರಸ್ಸಿಗೆ ಕೇಂದ್ರ ಸರ್ಕಾರ ಬೆಂಬಲ ಸೂಚಿಸಿದೆ ಎನ್ನಲಾಗಿದೆ. 

ಅತ್ತ ಕೇಂದ್ರ ಸರ್ಕಾರ ನೈತಿಕ ಸಮಿತಿ ವರದಿಗೆ ಬೆಂಬಲ ಸೂಚಿಸುತ್ತಲೇ ಇತ್ತ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಮತ್ತು ಟಿಎಂಸಿ ಸಂಸದರು, ನೈತಿಕ ಸಮಿತಿ ವರದಿಯನ್ನು ಅಧ್ಯಯನ ಮಾಡಲು ಕಾಲಾವಕಾಶ ನೀಡಬೇಕು ಎಂದು ಕೇಳಿವೆ. ಈ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಮಾತನಾಡಿ, ಎಥಿಕ್ಸ್ ಸಮಿತಿ ವರದಿಯನ್ನು ಮಧ್ಯಾಹ್ನ ಮಂಡನೆ ಮಾಡಿರುವುದು ಸಂಸದರಿಗೆ ಓದಲು ಕೇವಲ ಎರಡು ಗಂಟೆ ಮಾತ್ರ ಸಿಕ್ಕಂತಾಗುತ್ತದೆ. ಹೀಗಾಗಿ ಸಮಿತಿ ವರದಿ ಅಧ್ಯಯನಕ್ಕೆ ಕನಿಷ್ಟ 48 ಗಂಟೆಗಳ ಕಾಲಾವಕಾಶ ಬೇಕು ಎಂದು ಒತ್ತಾಯಿಸಿದರು. 

ಇದೇ ವಾದವನ್ನು ಮಂಡಿಸಿದ ಮತ್ತೋರ್ವ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ವರದಿಯನ್ನು ಓದಲು ಸದನಕ್ಕೆ ಹೆಚ್ಚಿನ ಸಮಯವನ್ನು ನೀಡಿದರೆ ಸ್ವರ್ಗ ಕುಸಿಯುವುದಿಲ್ಲ. ಆರೋಪಿತ ವ್ಯಕ್ತಿಗೆ ಸದನದಲ್ಲಿ ಮಾತನಾಡಲೂ ಅವಕಾಶ ನೀಡಿಲ್ಲ, ಇದು ಸಹಜ ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ.

ಮೋಯಿತ್ರಾ ಅವರನ್ನು ಉಚ್ಚಾಟಿಸಬೇಕೆಂಬ ನೈತಿಕ ಸಮಿತಿಯ ಶಿಫಾರಸು ಮೂಲಭೂತವಾಗಿ ದೋಷಪೂರಿತವಾಗಿದೆ. ಏಕೆಂದರೆ ಸಮಿತಿಯು ವರದಿಯನ್ನು ಮಂಡಿಸಬಹುದು. ಆದರೆ ಶಿಕ್ಷೆಯನ್ನು ನಿರ್ದೇಶಿಸಲು ಸಾಧ್ಯವಿಲ್ಲ. ಸದನವು ಇಂದು ನ್ಯಾಯಾಧೀಶರು ಮತ್ತು ತೀರ್ಪುಗಾರರಾಗುತ್ತಿದ್ದಾರೆ. ಎಥಿಕ್ಸ್ ಕಮಿಟಿಯ 495 ಪುಟಗಳ ವರದಿಯನ್ನು ಅಧ್ಯಯನ ಮಾಡಲು ಕನಿಷ್ಠ 4 ದಿನಗಳ ಕಾಲಾವಕಾಶ ನೀಡಬೇಕು ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT