ಅಕ್ಬರುದ್ದೀನ್‌ ಒವೈಸಿ 
ದೇಶ

ತೆಲಂಗಾಣ ಹಂಗಾಮಿ ಸ್ಪೀಕರ್ ಆಗಿ ಅಕ್ಬರುದ್ದೀನ್‌ ಒವೈಸಿ: ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ

ತೆಲಂಗಾಣ ವಿಧಾನಸಭೆಯ ಹಂಗಾಮಿ ಸ್ಪೀಕರ್ ಅಕ್ಬರುದ್ದೀನ್ ಓವೈಸಿ ಅವರು ಇಂದು (ಶನಿವಾರ) ನೂತನ ಶಾಸಕರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಹೊಸದಾಗಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಹೈದರಾಬಾದ್: ತೆಲಂಗಾಣ ವಿಧಾನಸಭೆಯ ಹಂಗಾಮಿ ಸ್ಪೀಕರ್ ಅಕ್ಬರುದ್ದೀನ್ ಓವೈಸಿ ಅವರು ಇಂದು (ಶನಿವಾರ) ನೂತನ ಶಾಸಕರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಹೊಸದಾಗಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಹಂಗಾಮಿ ಸ್ಪೀಕರ್ ಅಕ್ಬರುದ್ದೀನ್ ಓವೈಸಿ ಅವರ ಅಧ್ಯಕ್ಷತೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಬಿಜೆಪಿ ಶಾಸಕರು ನಿರಾಕರಿಸಿದ್ದು, ಸದನದಿಂದ ಹೊರನಡೆದಿದ್ದಾರೆ. ನಾವು ತೆಲಂಗಾಣದಲ್ಲಿ 8 ಸ್ಥಾನಗಳನ್ನು ಗೆದ್ದಿದ್ದೇವೆ.

ಹಿರಿಯ ನಾಯಕರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸುವುದು ಸಂಪ್ರದಾಯ. ಆದರೆ, ಎಐಎಂಐಎಂ ಜೊತೆಗಿನ ಹೊಂದಾಣಿಕೆಯಿಂದಾಗಿ ಕಾಂಗ್ರೆಸ್ ಅಕ್ಬರುದ್ದೀನ್ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದೆ. ಇದಕ್ಕೆ ನಾವು ಆಕ್ಷೇಪಿಸುತ್ತೇವೆ. ಈ ಕುರಿತು ರಾಜ್ಯಪಾಲರಿಗೆ ಮಾಹಿತಿ ನೀಡುತ್ತೇವೆ’ ಎಂದು ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹೇಳಿದ್ದಾರೆ.

ಕಳೆದ ತಿಂಗಳ ವಿಧಾನಸಭಾ ಚುನಾವಣೆಯಲ್ಲಿ ಗೋಶಾಮಹಲ್‌ನಿಂದ ಗೆದ್ದಿದ್ದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರು ಎಐಎಂಐಎಂ ಮುಂದೆ "ಜೀವಂತ ಇರುವವರೆಗೂ" ಪ್ರಮಾಣವಚನ ಸ್ವೀಕರಿಸುವುದಿಲ್ಲ ಎಂದು ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಪೂರ್ಣಾವಧಿ ಸ್ಪೀಕರ್ ನೇಮಕವಾದ ಬಳಿಕವಷ್ಟೇ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT