ಸಂಸದ ಡ್ಯಾನಿಶ್ ಅಲಿ 
ದೇಶ

ಪಕ್ಷ ವಿರೋಧಿ ಚಟುವಟಿಕೆ: ಬಿಎಸ್ ಪಿಯಿಂದ ಸಂಸದ ಡ್ಯಾನಿಶ್ ಅಲಿ ಅಮಾನತು!

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಬಿಎಸ್ ಪಿ ಸಂಸದ ಡ್ಯಾನಿಶ್ ಅಲಿ ಅವರನ್ನು ಶನಿವಾರ ಪಕ್ಷದಿಂದ ಅಮಾನತುಗೊಳಿಸಿದೆ. ಕೆಲವು ತಿಂಗಳ ಹಿಂದೆ  ಬಿಜೆಪಿ ಸಂಸದ ರಮೇಶ್ ಬಿಧುರಿ ಸಂಸತ್ತಿನ ಒಳಗೆ ಅಧಿವೇಶನದಲ್ಲಿ ಡ್ಯಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದರು.

ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಬಿಎಸ್ ಪಿ ಸಂಸದ ಡ್ಯಾನಿಶ್ ಅಲಿ ಅವರನ್ನು ಶನಿವಾರ ಪಕ್ಷದಿಂದ ಅಮಾನತುಗೊಳಿಸಿದೆ. ಕೆಲವು ತಿಂಗಳ ಹಿಂದೆ  ಬಿಜೆಪಿ ಸಂಸದ ರಮೇಶ್ ಬಿಧುರಿ ಸಂಸತ್ತಿನ ಒಳಗೆ ಅಧಿವೇಶನದಲ್ಲಿ ಡ್ಯಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದರು.

ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಡ್ಯಾನಿಶ್ ಅಲಿ ಅವರಿಗೆ ಮೊದಲೇ ಎಚ್ಚರಿಕೆ ನೀಡಲಾಗಿತ್ತು ಎಂದು ಬಿಎಸ್‌ಪಿ ಹೇಳಿಕೆಯಲ್ಲಿ ತಿಳಿಸಿದೆ.

 "ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಮೊದಲೇ ಸ್ಪಷ್ಟಪಡಿಸಲಾಗಿತ್ತು. ನೀವು ಕೂಡಾ ಸ್ಪಷ್ಟಪಡಿಸುವುದು ಕಡ್ಡಾಯವಾಗಿದೆ. 2018ರಲ್ಲಿ ಕರ್ನಾಟಕದಲ್ಲಿ ದೇವೇಗೌಡರ ನೇತೃತ್ವದ ಜನತಾ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೀರಿ.
ಆ ಸಮಯದಲ್ಲಿ ಬಿಎಸ್‌ಪಿ ಮತ್ತು ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸಿದ್ದವು. ಪಕ್ಷಕ್ಕಾಗಿ ಕೆಲಸ ಮಾಡುತ್ತೀರಿ ಎಂಬ ಷರತ್ತುಗಳ ಅಡಿ ಅಮ್ರೋಹಾದಿಂದ ಟಿಕೆಟ್ ನೀಡಲಾಗಿತ್ತು ಎಂದು ಅಮಾನತು ನೋಟಿಸ್ ನಲ್ಲಿ ಹೇಳಲಾಗಿದೆ. 

ಅಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲು ಪಕ್ಷ ವಿರೋಧಿ ಚಟುವಟಿಕೆ ಉಲ್ಲೇಖಿಸಿರುವ ಬಿಎಸ್‌ಪಿ, ಆ ಸಮಯದಲ್ಲಿ ನೀಡಿದ ಭರವಸೆಗಳನ್ನು ನೀವು ಮರೆತಿದ್ದೀರಿ ಎಂದು ತೋರುತ್ತಿದೆ. ಆದ್ದರಿಂದ, ನಿಮ್ಮನ್ನು ಪಕ್ಷದಿಂದ ಅಮಾನತುಗೊಳಿಸಲಾಗುತ್ತಿದೆ ಎಂದು ಹೇಳಿದೆ.

ಕಾಸಿಗಾಗಿ ಪ್ರಶ್ನೆ ಪ್ರಕರಣದಲ್ಲಿ ಟಿಎಂಸಿ ಸದಸ್ಯೆ ಮಹುವಾ ಮೊಯಿತ್ರಾ ಅವರನ್ನು ಉಚ್ಚಾಟಿಸುವ ನಿರ್ಧಾರದ ವಿರುದ್ಧ ಪ್ರತಿಪಕ್ಷಗಳ ಸದಸ್ಯರೊಂದಿಗೆ ಡ್ಯಾಲಿ ಲೋಕಸಭೆ ಕಲಾಪದಿಂದ ಹೊರ ನಡೆದ  ಮಾರನೇ ದಿನವೇ ಬಿಎಸ್ ಪಿ ಈ ಕ್ರಮ ಕೈಗೊಂಡಿದೆ.

ಮತ್ತೊಂದೆಡೆ ತಮ್ಮ ಅಮಾನತು ಕುರಿತು ಪ್ರತಿಕ್ರಿಯಿಸಿರುವ ಡ್ಯಾನಿಶ್ ಅಲಿ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ನಿರ್ಧಾರ ದುರದೃಷ್ಟಕರ. ಯಾವುದೇ ರೀತಿಯ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಲ್ಲ. ಇದಕ್ಕೆ ನನ್ನ ಕ್ಷೇತ್ರದ ಜನರು ಸಾಕ್ಷಿಯಾಗಿದ್ದಾರೆ. ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿದ್ದೇನೆ ಮತ್ತು ಮುಂದೆಯೂ ಮಾಡುತ್ತೇನೆ. ಇದನ್ನು ಮಾಡುವುದು ಅಪರಾಧವಾದರೆ ಅದಕ್ಕೆ ಶಿಕ್ಷೆಯನ್ನು ಎದುರಿಸಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ