ಕೆ. ಚಂದ್ರಶೇಖರ ರಾವ್ 
ದೇಶ

ತೆಲಂಗಾಣ: ಬಿಆರ್‌ಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಕೆಸಿಆರ್ ಆಯ್ಕೆ

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಶನಿವಾರ ಬಿಆರ್‌ಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಹೈದರಾಬಾದ್: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಶನಿವಾರ ಬಿಆರ್‌ಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಇಂದು ಹೈದರಾಬಾದ್‌ನಲ್ಲಿ ಹೊಸದಾಗಿ ಆಯ್ಕೆಯಾದ ಬಿಆರ್‌ಎಸ್ ಶಾಸಕರ ಸಭೆಯಲ್ಲಿ ಕೆಸಿಆರ್ ಅವರನ್ನು ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಯಿತು.

"ವಿಧಾನಸಭೆ ಅಧಿವೇಶನಕ್ಕೆ ಮುಂಚಿತವಾಗಿ ತೆಲಂಗಾಣ ಭವನದಲ್ಲಿ ಬಿಆರ್‌ಎಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರನ್ನು ಬಿಆರ್ ಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ" ಎಂದು ಬಿಆರ್‌ಎಸ್ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.

ವಿಧಾನಸಭೆಯ ಮಾಜಿ ಸ್ಪೀಕರ್ ಪೋಚಾರಂ ಶ್ರೀನಿವಾಸ್ ರೆಡ್ಡಿ ಅವರು, ಕೆಸಿಆರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಮಾಜಿ ಸಚಿವರಾದ ಟಿ ಶ್ರೀನಿವಾಸ್ ಯಾದವ್ ಮತ್ತು ಕಡಿಯಂ ಶ್ರೀಹರಿ ಅವರು ಪ್ರಸ್ತಾಪವನ್ನು ಬೆಂಬಲಿಸಿದರು ಎಂದು ಬಿಆರ್ ಎಸ್ ಹೇಳಿದೆ.

ಸಭೆಯ ಅಧ್ಯಕ್ಷತೆಯನ್ನು ಬಿಆರ್‌ಎಸ್ ಸಂಸದೀಯ ಪಕ್ಷದ ನಾಯಕ ಕೆ.ಕೇಶವ ರಾವ್ ವಹಿಸಿದ್ದರು.

ಇತ್ತೀಚಿಗೆ ನಡೆಗ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 119 ಸ್ಥಾನಗಳ ಪೈಕಿ ಬಿಆರ್‌ಎಸ್ ಕೇವಲ 39 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ 64 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ, ಎಐಎಂಐಎಂ ಮತ್ತು ಸಿಪಿಐ ಕ್ರಮವಾಗಿ ಎಂಟು, ಏಳು ಮತ್ತು ಒಂದು ಸ್ಥಾನ ಗಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT