ಮೀನಾಕ್ಷಿ ಲೇಖಿ 
ದೇಶ

ಸಂಸತ್ತಿನಲ್ಲಿ ಹಮಾಸ್ ಕುರಿತ ಪ್ರಶ್ನೆಗೆ ಉತ್ತರಿಸಲು ಮೀನಾಕ್ಷಿ ಲೇಖಿ ನಕಾರ!

ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಲೋಕಸಭೆಯಲ್ಲಿ ಹಮಾಸ್ ನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ. ಹೀಗಾಗಿ ಪ್ರತಿಪಕ್ಷಗಳು ತನಿಖೆಗೆ ಒತ್ತಾಯಿಸಿವೆ. 

ನವದೆಹಲಿ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಲೋಕಸಭೆಯಲ್ಲಿ ಹಮಾಸ್ ನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ. ಹೀಗಾಗಿ ಪ್ರತಿಪಕ್ಷಗಳು ತನಿಖೆಗೆ ಒತ್ತಾಯಿಸಿವೆ. 

ಹಮಾಸ್ ನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವ ಕುರಿತು ಲೋಕಸಭೆಯ ಪ್ರಶ್ನೆಯ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ, ಈ ಪ್ರಶ್ನೆ ಮತ್ತು  ಉತ್ತರದೊಂದಿಗೆ ನಾನು ಯಾವುದೇ ಕಾಗದಕ್ಕೆ ಸಹಿ ಮಾಡದ ಕಾರಣ ನಿಮಗೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

"ಹಮಾಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕು ಎಂದು ಕಾಂಗ್ರೆಸ್ ಸಂಸದ ಕುಂಬಕುಡಿ ಸುಧಾಕರನ್ ಪ್ರಶ್ನೆ ಕೇಳಿದ್ದಾರೆ. ಯಾವುದೇ ಸಂಘಟನೆಯನ್ನು ಭಯೋತ್ಪಾದಕ ಎಂದು ಘೋಷಿಸುವುದು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ವ್ಯಾಪ್ತಿಗೆ ಬರುತ್ತದೆ ಮತ್ತು  ಕಾಯ್ದೆಯ ನಿಬಂಧನೆಗಳ ಪ್ರಕಾರ ಸಂಬಂಧಿತ ಸರ್ಕಾರಿ ಇಲಾಖೆಗಳಿಂದ ಪರಿಗಣಿಸಲಾಗುತ್ತದೆ ಎಂದು ಲೇಖಿ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಈ ಉತ್ತರ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಶಿವಸೇನಾ ರಾಜ್ಯಸಭಾ ಸದಸ್ಯೆ ಪ್ರಿಯಾಂಕಾ ಚತುರ್ವೇದಿ,  (ಲೇಖಿ) ಇದು ನಕಲಿ ಪ್ರತಿಕ್ರಿಯೆ ಎಂದು ಹೇಳುತ್ತಿದ್ದಾರೆಯೇ, ಹೌದು ಎಂದಾದರೆ ಇದು ಗಂಭೀರ ಉಲ್ಲಂಘನೆ ಮತ್ತು ಚಾಲ್ತಿಯಲ್ಲಿರುವ ನಿಯಮಗಳ ಉಲ್ಲಂಘನೆಯಾಗಿದೆ. ವಿದೇಶಾಂಗ ಸಚಿವಾಲಯದ ಸ್ಪಷ್ಟೀಕರಣಕ್ಕಾಗಿ ಕೃತಜ್ಞರಾಗಿರುತ್ತೇನೆ ಎಂದಿದ್ದಾರೆ. 

ಕಣ್ಣೂರು ಕ್ಷೇತ್ರದ ಸುಧಾಕರನ್, ಭಾರತದಲ್ಲಿ ಹಮಾಸ್ ನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸುವ ಯಾವುದೇ ಪ್ರಸ್ತಾವನೆಯನ್ನು ಸರ್ಕಾರ ಹೊಂದಿದೆಯೇ, ಹಾಗಿದ್ದರೆ, ಅದರ ವಿವರಗಳು ಮತ್ತು ಇಲ್ಲದಿದ್ದರೆ ಕಾರಣವೇನು ಎಂದು ಪ್ರಶ್ನೆ ಕೇಳಿದ್ದರು. ಹಮಾಸ್ ನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಇಸ್ರೇಲ್ ಸರ್ಕಾರ ಭಾರತ ಸರ್ಕಾರದೊಂದಿಗೆ ಯಾವುದೇ ಬೇಡಿಕೆ ಇಟ್ಟಿದ್ದಿಯೇ, ಹಾಗಿದ್ದಲ್ಲಿ, ಅದರ ವಿವರ ನೀಡಬೇಕೆಂದು ಕೋರಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT