ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ ಜನರ ಚಿತ್ರ 
ದೇಶ

ತಮಿಳುನಾಡು: ಪ್ರವಾಹ ಸಂತ್ರಸ್ತರಿಗೆ 6,000 ರೂ. ಹಣಕಾಸಿನ ನೆರವು ಘೋಷಿಸಿದ ಸಿಎಂ ಸ್ಟಾಲಿನ್

ಮೈಚಾಂಗ್ ಚಂಡಮಾರುತದ ಹೊಡೆತಕ್ಕೆ ಸಿಲುಕಿ ತಮಿಳುನಾಡು ತತ್ತರಿಸಿದೆ. ರಾಜಧಾನಿ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್‌ಪೇಟ್  ಮತ್ತಿತರ ಪ್ರದೇಶಗಳು ತೀವ್ರ ಪ್ರವಾಹವನ್ನು ಎದುರಿಸುತ್ತಿದೆ.

ತಮಿಳುನಾಡು: ಮೈಚಾಂಗ್ ಚಂಡಮಾರುತದ ಹೊಡೆತಕ್ಕೆ ಸಿಲುಕಿ ತಮಿಳುನಾಡು ತತ್ತರಿಸಿದೆ. ರಾಜಧಾನಿ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್‌ಪೇಟ್  ಮತ್ತಿತರ ಪ್ರದೇಶಗಳು ತೀವ್ರ ಪ್ರವಾಹವನ್ನು ಎದುರಿಸುತ್ತಿದೆ.

ಸದ್ಯ ಮಳೆ ನಿಂತಿದ್ದರೂ ಹಲವು ಪ್ರದೇಶಗಳು ಜಲಾವೃತವಾಗಿದ್ದು, ದೈನಂದಿನ ಜನಜೀವನದ ಮೇಲೆ ಅಪಾರ ಪರಿಣಾಮ ಬೀರಿದ್ದು, ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ಈ ಮಧ್ಯೆ ಪ್ರವಾಹ ಪೀಡಿತ ಸಂತ್ರಸ್ತರಿಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರೂ. 6,000 ಹಣಕಾಸಿನ ನೆರವು ಘೋಷಿಸಿದ್ದಾರೆ. 

ಚಂಡಮಾರುತದಿಂದ ಜೀವನೋಪಾಯಕ್ಕೆ ತೊಂದರೆಯಾದ ಜನರಿಗೆ ಆರ್ಥಿಕ ನೆರವನ್ನು ಪಡಿತರ ಅಂಗಡಿಗಳಲ್ಲಿ ನಗದು ರೂಪದಲ್ಲಿ ಪಾವತಿಸಲಾಗುವುದು ಎಂದು ಸರ್ಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.ಅಲ್ಲದೆ, ಇತರ ವರ್ಗಗಳ ಅಡಿಯಲ್ಲಿ ಪರಿಹಾರವನ್ನು ಹೆಚ್ಚಿಸಲಾಗುವುದು ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT