ವಸುಂಧರಾ ರಾಜೆ 
ದೇಶ

ರಾಜಸ್ಥಾನ ಸಿಎಂ ಆಯ್ಕೆ ಕಗ್ಗಂಟು: ವಸುಂಧರಾ ರಾಜೆಯನ್ನು ಭೇಟಿ ಮಾಡಿದ 10 ಶಾಸಕರು

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು ಒಂದು ವಾರ ಕಳೆದಿದ್ದು, ಬಿಜೆಪಿ ಇಂದು ಛತ್ತೀಸ್ ಗಢ ಸಿಎಂ ಆಯ್ಕೆ ಮಾಡಿದೆ. ಆದರೆ ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಸಿಎಂ ಆಯ್ಕೆ ಕಗ್ಗಂಟಾಗಿದೆ. 

ಜೈಪುರ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು ಒಂದು ವಾರ ಕಳೆದಿದ್ದು, ಬಿಜೆಪಿ ಇಂದು ಛತ್ತೀಸ್ ಗಢ ಸಿಎಂ ಆಯ್ಕೆ ಮಾಡಿದೆ. ಆದರೆ ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಸಿಎಂ ಆಯ್ಕೆ ಕಗ್ಗಂಟಾಗಿದೆ. 

ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೆ ಅವರ ಹೆಸರು ಸಿಎಂ ಹುದ್ದೆಗೆ ಮುಂಚೂಣಿಯಲ್ಲಿದೆ.  ಈ ನಡುವೆ 10 ಶಾಸಕರು ವಸುಂಧರಾ ರಾಜೆ ಅವರನ್ನು ಭೇಟಿ ಮಾಡಿದ್ದಾರೆ.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಸಭೆಯನ್ನು ಇನ್ನಷ್ಟೇ ನಡೆಸಬೇಕಿದ್ದು, ಸಭೆಯಲ್ಲಿ ಸಿಎಂ ಆಯ್ಕೆ ನಡೆಯಲಿದೆ. 

ಅಜಯ್ ಸಿಂಗ್, ಬಾಬು ಸಿಂಗ್ ಸೇರಿದಂತೆ ಹಲವರು ರಾಜೆ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ವಸುಂಧರಾ ರಾಜೆ ಈಗಾಗಲೇ 2 ಬಾರಿ ರಾಜಸ್ಥಾನ ಸಿಎಂ ಆಗಿದ್ದಾರೆ.
 
ರಾಜಸ್ಥಾನ ಬಿಜೆಪಿ ಶಾಸಕರು- ವಸುಂಧರಾ ರಾಜೆ ಭೇಟಿಯನ್ನು ಶಕ್ತಿ ಪ್ರದರ್ಶನದ ಭಾಗವೆಂದೇ ವಿಶ್ಲೇಷಿಸಲಾಗುತ್ತಿದೆ. ವಸುಂಧರಾ ರಾಜೆ ಇತ್ತೀಚೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಸಿಎಂ ಆಯ್ಕೆ ಸಂಬಂಧ ರಾಜಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ಈಗಾಗಲೇ ವೀಕ್ಷಕರನ್ನು ಕಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT