ಛತ್ತೀಸ್ ಗಢ ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ 
ದೇಶ

ಛತ್ತೀಸ್ ಗಢ ಮುಖ್ಯಮಂತ್ರಿಯಾಗಿ ಮಾಜಿ ಕೇಂದ್ರ ಸಚಿವ ವಿಷ್ಣುದೇವ್ ಸಾಯಿ ಆಯ್ಕೆ 

ಛತ್ತೀಸ್ ಗಢದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಕೇಂದ್ರ ಸಚಿವ ವಿಷ್ಣುದೇವ್ ಸಾಯಿ ಆಯ್ಕೆಯಾಗಿದ್ದಾರೆ. 

ರಾಯ್ಪುರ: ಛತ್ತೀಸ್ ಗಢದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಕೇಂದ್ರ ಸಚಿವ ವಿಷ್ಣುದೇವ್ ಸಾಯಿ ಆಯ್ಕೆಯಾಗಿದ್ದಾರೆ. 

ಬಿಜೆಪಿ ವೀಕ್ಷಕರ ಸಮ್ಮುಖದಲ್ಲಿ ನಡೆದ ಶಾಸಕರ ಸಭೆಯಲ್ಲಿ ಸಿಎಂ ಹುದ್ದೆಗೆ ವಿಷ್ಣುದೇವ್ ಸಾಯಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. 

ಶಾಸಕಾಂಗ ಸಭೆಯಲ್ಲಿ ಬಿಜೆಪಿ ಹೈಕಮಾಂಡ್ ಕಳಿಸಿದ್ದ ವೀಕ್ಷಕರ ತಂಡ ವಿಷ್ಣುದೇವ್ ಸಾಯಿ ಅವರ ಹೆಸರನ್ನು ಸೂಚಿಸಿದ್ದು, ಶಾಸಕರು ಅದನ್ನು ಅನುಮೋದಿಸಿದ್ದಾರೆ. ಛತ್ತೀಸ್ ಗಢದ ರಾಯ್ಘರ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ವಿಷ್ಣುದೇವ್ ಸಾಯಿ, ಪ್ರಧಾನಿ ಮೋದಿ ಅವರ ಮೊದಲ ಅವಧಿಯಲ್ಲಿ ಉಕ್ಕು ಖಾತೆ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

59 ವರ್ಷದ ವಿಷ್ಣುದೇವ್ ಸಾಯಿ ಮೂಲತಃ ಆರ್ ಎಸ್ಎಸ್ ಹಿನ್ನೆಲೆಯುಳ್ಳವರಾಗಿದ್ದು, ಮಾಜಿ ಸಿಎಂ ರಮಣ್ ಸಿಂಗ್ ಗೂ ಆಪ್ತರಾಗಿದ್ದಾರೆ. ವಿಷ್ಣುದೀಪ್ ಸಾಯಿ ನಾಲ್ಕನೇ ಅವಧಿಗೆ ಸಂಸದರಾಗಿದ್ದು, 2006ರಲ್ಲಿ ಛತ್ತೀಸ್ ಗಢ ಬಿಜೆಪಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದು, ಅತ್ಯುತ್ತಮ ಸಂಘಟಕರೆಂಬ ಖ್ಯಾತಿ ಹೊಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT