ಪ್ರಧಾನಿ ನರೇಂದ್ರ ಮೋದಿ-ಅಮಿತ್ ಶಾ(ಸಂಗ್ರಹ ಚಿತ್ರ) 
ದೇಶ

370ನೇ ವಿಧಿ ಮೇಲಿನ ಸುಪ್ರೀಂ ಕೋರ್ಟ್ ತೀರ್ಪು ಭರವಸೆಯ ಬೆಳಕು: ಪ್ರಧಾನಿ ಮೋದಿ; ದೂರದೃಷ್ಟಿಯ ನಿರ್ಧಾರ: ಅಮಿತ್ ಶಾ

ಆರ್ಟಿಕಲ್ 370 ರದ್ದತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. 

ನವದೆಹಲಿ: ಆರ್ಟಿಕಲ್ 370 ರದ್ದತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. 

"370 ನೇ ವಿಧಿಯ ರದ್ದತಿ ಕುರಿತು ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದೆ. ಆಗಸ್ಟ್ 5, 2019 ರಂದು ಭಾರತದ ಸಂಸತ್ತು ತೆಗೆದುಕೊಂಡ ನಿರ್ಧಾರವನ್ನು ಸಾಂವಿಧಾನಿಕವಾಗಿ ಎತ್ತಿಹಿಡಿಯುತ್ತದೆ; ಇದು ಜಮ್ಮು-ಕಾಶ್ಮೀರ ಮತ್ತು ಲಡಾಖ್ ನ ನಮ್ಮ ಸಹೋದರಿಯರು ಮತ್ತು ಸಹೋದರರಿಗೆ ಭರವಸೆ, ಪ್ರಗತಿ ಮತ್ತು ಏಕತೆಯ ಪ್ರತಿಧ್ವನಿಸುವ ಘೋಷಣೆಯಾಗಿದೆ'' ಎಂದು ಹೇಳಿದ್ದಾರೆ. 

"ನ್ಯಾಯಾಲಯವು ತನ್ನ ಆಳವಾದ ಬುದ್ಧಿವಂತಿಕೆ ಪ್ರದರ್ಶಿಸಿ ತೀರ್ಪು ನೀಡಿದ್ದು, ಭಾರತೀಯರಾದ ನಾವು ಎಲ್ಲಕ್ಕಿಂತ ಹೆಚ್ಚಾಗಿ ಪ್ರೀತಿಸುವ ಮತ್ತು ಏಕತೆಯ ಸಾರವನ್ನು ಬಲಪಡಿಸುವ ರೀತಿ ತೀರ್ಪು ನೀಡಿದೆ. ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ಜನರಿಗೆ ನಿಮ್ಮ ಕನಸುಗಳನ್ನು ಈಡೇರಿಸುವ ನಮ್ಮ ಬದ್ಧತೆ ಎಂದು ನಾನು ಭರವಸೆ ನೀಡಲು ಬಯಸುತ್ತೇನೆ'' ಎಂದು ಹೇಳಿದ್ದಾರೆ. 

“ಪ್ರಗತಿಯ ಫಲಗಳು ನಿಮ್ಮನ್ನು ತಲುಪುವುದು ಮಾತ್ರವಲ್ಲದೆ 370 ನೇ ವಿಧಿಯ ಕಾರಣದಿಂದಾಗಿ ಅನುಭವಿಸಿದ ನಮ್ಮ ಸಮಾಜದ ಅತ್ಯಂತ ದುರ್ಬಲ ಮತ್ತು ಅಂಚಿನಲ್ಲಿರುವ ವರ್ಗಗಳಿಗೆ ಅದರ ಪ್ರಯೋಜನಗಳನ್ನು ವಿಸ್ತರಿಸುವುದನ್ನು ನಾವು ಈ ಸಂದರ್ಭದಲ್ಲಿ ನೀಡುವುದಾಗಿ ಆಶ್ವಾಸನೆ ನೀಡುತ್ತೇವೆ ಎಂದರು. 

"ಇಂದಿನ ತೀರ್ಪು ಕೇವಲ ಕಾನೂನು ತೀರ್ಪಲ್ಲ; ಇದು ಭರವಸೆಯ ದಾರಿದೀಪವಾಗಿದೆ, ಉಜ್ವಲ ಭವಿಷ್ಯದ ಭರವಸೆ ಮತ್ತು ಬಲಿಷ್ಠ, ಅಖಂಡ ಭಾರತವನ್ನು ನಿರ್ಮಿಸುವ ನಮ್ಮ ಸಾಮೂಹಿಕ ಸಂಕಲ್ಪಕ್ಕೆ ಸಾಕ್ಷಿಯಾಗಿದೆ. NayaJammuKashmir." ಎಂದು ಹ್ಯಾಶ್ ಟ್ಯಾಗ್ ನೀಡಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಆರ್ಟಿಕಲ್ 370 ರದ್ದತಿ ನಿರ್ಧಾರವನ್ನು ಎತ್ತಿಹಿಡಿದ ಭಾರತದ ಸುಪ್ರೀಂ ಕೋರ್ಟ್ ತೀರ್ಪನ್ನು ನಾನು ಸ್ವಾಗತಿಸುತ್ತೇನೆ.ಪ್ರಧಾನಿ ಮೋದಿಯವರು ಆರ್ಟಿಕಲ್ 370 ನ್ನು ರದ್ದುಗೊಳಿಸುವ ದೂರದೃಷ್ಟಿಯ ನಿರ್ಧಾರವನ್ನು ತೆಗೆದುಕೊಂಡರು. ಅಲ್ಲಿಂದೀಚೆಗೆ ಜಮ್ಮು-ಕಾಶ್ಮೀರದಲ್ಲಿ ಶಾಂತಿ ಮತ್ತು ಸಹಜತೆ ಮರಳಿದೆ. ಹಿಂಸಾಚಾರದಿಂದ ನಲುಗಿ ಹೋಗಿದ್ದ ಕಣಿವೆಯಲ್ಲಿ ಬೆಳವಣಿಗೆ ಮತ್ತು ಅಭಿವೃದ್ಧಿಯು ಮಾನವ ಜೀವನಕ್ಕೆ ಹೊಸ ಅರ್ಥವನ್ನು ತಂದಿದೆ. ಪ್ರವಾಸೋದ್ಯಮ ಮತ್ತು ಕೃಷಿ ಕ್ಷೇತ್ರಗಳಲ್ಲಿನ ಸಮೃದ್ಧಿಯು ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ನಿವಾಸಿಗಳ ಆದಾಯ ಮಟ್ಟವನ್ನು ಹೆಚ್ಚಿಸಿದೆ.

ಇಂದು, ಸುಪ್ರೀಂ ಕೋರ್ಟ್ನ ತೀರ್ಪು 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರವು ಸಂಪೂರ್ಣವಾಗಿ ಸಾಂವಿಧಾನಿಕವಾಗಿದೆ ಎಂದು ಸಾಬೀತುಪಡಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT