ನ್ಯಾ.ಸಂಜಯ್ ಕಿಶನ್ ಕೌಲ್ 
ದೇಶ

ಆರ್ಟಿಕಲ್ 370 ರದ್ದತಿ: ನ್ಯಾ. ಕೌಲ್ ಭಿನ್ನ ಆದೇಶದಲ್ಲೇನಿದೆ ಅಂದರೆ....

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ 5 ನ್ಯಾಯಾಧೀಶರ ಪೀಠ 370 ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ 5 ನ್ಯಾಯಾಧೀಶರ ಪೀಠ 370 ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

5 ಸದಸ್ಯರ ಪೀಠದಲ್ಲಿ ಒಬ್ಬರಾಗಿದ್ದ ನ್ಯಾ. ಕೌಲ್ ಉಳಿದ ನ್ಯಾಯಾಧೀಶರಿಗಿಂತ ಸ್ವಲ್ಪ ಭಿನ್ನವಾದ ಅಭಿಪ್ರಾಯವನ್ನು ಪ್ರಕಟಿಸಿದ್ದಾರೆ. 1980 ರಿಂದ ಜಮ್ಮು-ಕಾಶ್ಮೀರದಲ್ಲಿ ನಡೆದ ಮಾನವ ಹಕ್ಕುಗಳ ಮೇಲಿನ ದೌರ್ಜನ್ಯಗಳ ಮೇಲೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ನ್ಯಾ.ಸಂಜಯ್ ಕಿಶನ್ ಕೌಲ್ ತಮ್ಮ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

"1980 ರ ದಶಕದಿಂದಲೂ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ಅಥವಾ ಅಥವಾ ಸರ್ಕಾರದಲ್ಲಿರುವವರ ಹೊರತಾಗಿ ನಡೆದ ಮಾನವ ಹಕ್ಕುಗಳ ಉಲ್ಲಂಘನೆಗಳ ಕುರಿತು ತನಿಖೆ ನಡೆಸಿ ವರದಿ ನೀಡಲು ನಿಷ್ಪಕ್ಷಪಾತ ಸತ್ಯ ಮತ್ತು ಸಮನ್ವಯ ಸಮಿತಿಯನ್ನು ಸ್ಥಾಪಿಸಲು ನಾನು ಶಿಫಾರಸು ಮಾಡುತ್ತೇನೆ ಎಂದು ನ್ಯಾಯಮೂರ್ತಿ ಕೌಲ್ ಹೇಳಿದ್ದಾರೆ.

"ಭವಿಷ್ಯದೆಡೆಗೆ ಸಾಗಲು, ಈ ಹಿಂದೆ ಉಂಟಾಗಿರುವ ನೋವುಗಳನ್ನು, ಗಾಯಗಳನ್ನು ವಾಸಿಮಾಡುವ ಅಗತ್ಯವಿದೆ. ಪೀಳಿಗೆಗಳು ಕಳೆದರೂ ಜನರು ಆಘಾತವನ್ನು ಅನುಭವಿಸುತ್ತಾರೆ. ಆದ್ದರಿಂದ ಆಗಿರುವ ನೋವುಗಳನ್ನು ಗುಣಪಡಿಸುವ ಮೊದಲ ಹೆಜ್ಜೆಯಾಗಿ ಜಮ್ಮು-ಕಾಶ್ಮೀರದಲ್ಲಿ ನಡೆದ ಮಾನವ ಹಕ್ಕುಗಳ ಉಲ್ಲಂಘನೆಯ ಕೃತ್ಯಗಳು ನಡೆದಿರುವುದನ್ನು ಒಪ್ಪಿಕೊಳ್ಳಬೇಕಾಗುತ್ತದೆ" ಎಂದು ಅವರು ಹೇಳಿದರು. ಜಮ್ಮು ಮತ್ತು ಕಾಶ್ಮೀರವನ್ನು ಕ್ರಮೇಣ ಭಾರತಕ್ಕೆ ಸಂಯೋಜಿಸುವುದು 370 ರ ಮೂಲ ಗುರಿಯಾಗಿತ್ತು ಎಂದು ನ್ಯಾ. ಕೌಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT